ಪ್ರಾತಿನಿಧಿಕ ಚಿತ್ರ 
ದೇಶ

ಹೆಚ್ಚು ವೇಗವಾಗಿ ಹರಡಬಲ್ಲ ಕೊರೊನಾ ವೈರಾಣು ರೂಪಾಂತರ ಓಮೈಕ್ರಾನ್‌ನ ಉಪತಳಿ ದೆಹಲಿಯಲ್ಲಿ ಪತ್ತೆ!

ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ (ಎಲ್‌ಎನ್‌ಜೆಪಿ) ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್‌ ಸೀಕ್ವೆನ್ಸಿಂಗ್)  ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ ಎಂದು ಆಸ್ಪತ್ರೆಯ ಉನ್ನತ ವೈದ್ಯಾಧಿಕಾರಿ ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ (ಎಲ್‌ಎನ್‌ಜೆಪಿ) ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್‌ ಸೀಕ್ವೆನ್ಸಿಂಗ್) ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ ಎಂದು ಆಸ್ಪತ್ರೆಯ ಉನ್ನತ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಪರೀಕ್ಷೆಗೆ ಕಳುಹಿಸಲಾಗಿದ್ದ ಹಲವು ಮಾದರಿಗಳಲ್ಲಿ ಓಮೈಕ್ರಾನ್‌ನ ಉಪತಳಿಯಾದ BA 2.75 ಪತ್ತೆಯಾಗಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ ಸುರೇಶ್ ಕುಮಾರ್ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿ 100 ಪರೀಕ್ಷೆಗಳಲ್ಲಿ ಹಲವು ಜನರಿಗೆ ಪಾಸಿಟಿವ್ ಆಗುತ್ತಿರುವುದು ಕಂಡುಬರುತ್ತಿದೆ. ವೇಗವಾಗಿ ಪಾಸಿಟಿವಿಟಿ ದರ ಕೂಡ ಏರಿಕೆಯಾಗುತ್ತಿದೆ. ಹೀಗಾಗಿ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಮಧ್ಯೆ ವೇಗವಾಗಿ ಹರಡುವ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ ಎಂದು ವೈದ್ಯಕೀಯ ನಿರ್ದೇಶಕರು ತಿಳಿಸಿದ್ದಾರೆ.

ಹೊಸದಾಗಿ ಪತ್ತೆಯಾಗಿರುವ ಓಮೈಕ್ರಾನ್‌‌ನ ಉಪತಳಿಯು ವೇಗವಾಗಿ ಹರಡುತ್ತದೆ ಮತ್ತು ಹಿಂದಿನ ಸೋಂಕು ಹಾಗೂ ಲಸಿಕೆಯ ರೋಗನಿರೋಧಕ ಶಕ್ತಿಯಿಂದ ತಪ್ಪಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಡಾ. ಕುಮಾರ್ ಹೇಳಿದ್ದಾರೆ.

'ಓಮೈಕ್ರಾನ್‌ನ ಉಪ-ತಳಿ ಬಿಎ 2.75 ವರದಿಯಲ್ಲಿ ಕಂಡುಬಂದಿದೆ. ಇದು ಹೆಚ್ಚು ಪ್ರಸರಣ ದರವನ್ನು ಹೊಂದಿದೆ. ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾದ 90 ಮಾದರಿಗಳ ಅಧ್ಯಯನ ವರದಿಯಲ್ಲಿ ಈ ವಿಚಾರ ಹೊರಹೊಮ್ಮಿದೆ. ಈ ಹೊಸ ಉಪ-ತಳಿಯು ಈಗಾಗಲೇ ಲಸಿಕೆಯನ್ನು ತೆಗೆದುಕೊಂಡು ಪ್ರತಿಕಾಯಗಳನ್ನು ಹೊಂದಿರುವ ಜನರ ಮೇಲೆ ಕೂಡ ದಾಳಿ ಮಾಡುತ್ತದೆ' ಎಂದು ಡಾ. ಕುಮಾರ್ ಹೇಳಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಆದಾಗ್ಯೂ, ಸದ್ಯ ವರದಿಯಾಗುತ್ತಿರುವ ಹೊಸ ಪ್ರಕರಣಗಳಲ್ಲಿ ಸೋಂಕಿನ ತೀವ್ರತೆಯು ಕಡಿಮೆಯಿದೆ. ವಯಸ್ಸಾದವರು ಮತ್ತು ಈಗಾಗಲೇ ಇತರೆ ರೋಗಗಳನ್ನು ಹೊಂದಿರುವವರಿಗೆ ಅಪಾಯ ಹೆಚ್ಚು ಎಂದು ಅವರು ಹೇಳಿದರು.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 2,445 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದು ಫೆಬ್ರವರಿ 6 ರಿಂದೀಚೆಗೆ ಅತ್ಯಧಿಕವಾಗಿದೆ. ಪಾಸಿಟಿವಿಟಿ ಪ್ರಮಾಣವು ಶೇ 15.41ಕ್ಕೆ ಏರಿದೆ ಮತ್ತು ಏಳು ಜನರು ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT