ರಾಹುಲ್ ಗಾಂಧಿ 
ದೇಶ

ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ

ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಆದರೆ, ತನ್ನ ಸೂಚನೆಯ ಮೇರೆಗೆ ಬಡವರು ಪಡಿತರಕ್ಕಾಗಿ ಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ತಳ್ಳಿಹಾಕಿದೆ.

ಅಂತಹ ಯಾವುದೇ ಸೂಚನೆಯನ್ನು ನೀಡಲಾಗಿಲ್ಲ ಮತ್ತು ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿದ ಮತ್ತು ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ತಪ್ಪಿತಸ್ಥ ಪಡಿತರ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ ಎಂದು ಫ್ರೆಸ್ ಇನ್ಪರ್ಮೇಷನ್ ಬ್ಯೂರೋ ತನ್ನ 'PIBFactCheck'  ಟ್ವಿಟರ್‌ ಖಾತೆಯಲ್ಲಿ ತಿಳಿಸಿದೆ.

ತ್ರಿವರ್ಣ ಧ್ವಜ ನಮ್ಮ ಹೆಮ್ಮೆ ಮತ್ತು ಅದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ ಎಂದು ರಾಹುಲ್ ಗಾಂಧಿ ಫೇಸ್ ಬುಕ್ ನಲ್ಲಿ ಹೇಳಿದ್ದಾರೆ.  "ರಾಷ್ಟ್ರೀಯತೆಯನ್ನು ಎಂದಿಗೂ ಮಾರಲು ಸಾಧ್ಯವಿಲ್ಲ. ಪಡಿತರ ನೀಡುವಾಗ ಬಡವರಿಗೆ ತ್ರಿವರ್ಣ ಧ್ವಜಕ್ಕಾಗಿ 20 ರೂ. ಕೊಡುವಂತೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಹುಲ್  ಗಾಂಧಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT