ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ದೇಶ

ಕೋವಿಡ್-19: ದೇಶದಲ್ಲಿ 16,299 ಹೊಸ ಕೊರೊನಾ ಸೋಂಕು ಪ್ರಕರಣ, 53 ಜನ ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 16,299 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,42,06,996 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 16,299 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,42,06,996 ಕ್ಕೆ ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,25,076 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಇದೇ ಅವಧಿಯಲ್ಲಿ 53 ಜನರು ಸಾವಿಗೀಡಾಗಿದ್ದು, ಈ ಪೈಕಿ ನಾಲ್ಕು ಸಾವುಗಳು ಕೇರಳದಿಂದ ವರದಿಯಾಗಿವೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಾದ ಅಂಕಿಅಂಶಗಳು ತಿಳಿಸಿವೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.28ರಷ್ಟು ಸಕ್ರಿಯ ಪ್ರಕರಣಗಳಿವೆ. ಆದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.53 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 4.94ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ಇನ್ನು ಸೋಂಕಿನಿಂದ ಈವರೆಗೆ 4,35,55,041 ಜನರು ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಲಸಿಕೆ ಅಭಿಯಾನದ ಮೂಲಕ ದೇಶದಲ್ಲಿ ಈವರೆಗೆ 207.29 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT