ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ, ಧರಿಸದಿದ್ದರೆ 500 ರೂ. ದಂಡ

ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಗುರುವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸುವುದಾಗಿ ತಿಳಿಸಿದೆ.

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಗುರುವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸುವುದಾಗಿ ತಿಳಿಸಿದೆ.

ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಈ ದಂಡವು ನಾಲ್ಕು ಚಕ್ರದ ಖಾಸಗಿ ವಾಹನಗಳಲ್ಲಿ ಒಟ್ಟಿಗೆ ಪ್ರಯಾಣಿಸುವ ವ್ಯಕ್ತಿಗಳಿಗೆ ಅನ್ವಯಿಸುವುದಿಲ್ಲ.

ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ (ಎಲ್‌ಎನ್‌ಜೆಪಿ) ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್‌ ಸೀಕ್ವೆನ್ಸಿಂಗ್) ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ.

ಪರೀಕ್ಷೆಗೆ ಕಳುಹಿಸಲಾಗಿದ್ದ ಹಲವು ಮಾದರಿಗಳಲ್ಲಿ ಓಮೈಕ್ರಾನ್‌ನ ಉಪತಳಿಯಾದ BA 2.75 ಪತ್ತೆಯಾಗಿದೆ. ಇದು ಹೆಚ್ಚಿನ ಪ್ರಸರಣ ದರವನ್ನು ಹೊಂದಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ತಿಳಿಸಿದ್ದಾರೆ.

ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ದೆಹಲಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡ ವಿಧಿಸುವುದಾಗಿ ದೆಹಲಿ ಸರ್ಕಾರ ಹೇಳಿದೆ.

ಬುಧವಾರ, ದೆಹಲಿಯಲ್ಲಿ 2,146 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ 17.83 ಕ್ಕೆ ಏರಿದೆ. ರಾಷ್ಟ್ರ ರಾಜಧಾನಿಯಲ್ಲಿ 8 ಜನರು ಕೋವಿಡ್‌ನಿಂದಾಗಿ ಸಾವಿಗೀಡಾಹಿದ್ದಾರೆ. ಇದು ಸುಮಾರು 180 ದಿನಗಳಲ್ಲಿ ಅತಿ ಹೆಚ್ಚು ಮರಣ ಪ್ರಮಾಣವಾಗಿದೆ.

ದೆಹಲಿಯಲ್ಲಿ ಮಂಗಳವಾರದಂದು 2,495 ಕೋವಿಡ್ ಪ್ರಕರಣಗಳು ವರದಿ ಆಗಿದ್ದರೆ, ಬುಧವಾರ 2,146 ಪ್ರಕರಣಗಳು ದಾಖಲಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?