ಐಟಿ ದಾಳಿ 
ದೇಶ

ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.

ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು. ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT