ಟಿಎಂಸಿ ನಾಯಕ ಅನುಬ್ರತಾ ಮೊಂಡಲ್ 
ದೇಶ

ಜಾನುವಾರು ಕಳ್ಳಸಾಗಣೆ ಪ್ರಕರಣ: ಮಮತಾ ಬ್ಯಾನರ್ಜಿ ಆಪ್ತ ಸಹಾಯಕನನ್ನು ಬಂಧಿಸಿದ ಸಿಬಿಐ

2020ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.

ಕೋಲ್ಕತ್ತಾ: 2020ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಯ ಭಾಗವಾಗಿ ಮೊಂಡಲ್ ಅವರನ್ನು ಸಿಬಿಐ ಈ ಹಿಂದೆಯೂ ಎರಡು ಬಾರಿ ಪ್ರಶ್ನಿಸಿತ್ತು. ಇದೀಗ ಬಿರ್ಭೂಮ್ ಜಿಲ್ಲೆಯ ನಿವಾಸದಲ್ಲಿ ಅವರನ್ನು ಬಂಧಿಸಲಾಗಿದೆ.

2020ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ನಂತರ ಜಾನುವಾರು ಕಳ್ಳಸಾಗಣೆ ಹಗರಣದ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಸಿಬಿಐ ಪ್ರಕಾರ, 2015 ಮತ್ತು 2017 ರ ನಡುವೆ ಗಡಿಯುದ್ದಕ್ಕೂ ಕಳ್ಳಸಾಗಣೆ ಮಾಡುತ್ತಿದ್ದರಿಂದ 20,000 ದನದ ತಲೆಗಳನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಹಿಂದೆ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿತ್ತು. ಮೊಂಡಲ್ ಅವರ ಅಂಗರಕ್ಷಕ ಸೈಗಲ್ ಹೊಸೈನ್ ಅವರನ್ನೂ ತನಿಖಾ ಸಂಸ್ಥೆ ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT