ಸಾಂದರ್ಭಿಕ ಚಿತ್ರ 
ದೇಶ

ಲಂಪಿ ರೋಗ: ಪ್ರಾಣಿಗಳ ಸಂತೆ, ಜಾತ್ರೆ ನಿಷೇಧಿಸಿದ ರಾಜಸ್ಥಾನ ಸರ್ಕಾರ

ರಾಜಸ್ಥಾನದಲ್ಲಿ ಲಂಪಿ ವೈರಸ್‌ನಿಂದ ಉಂಟಾಗುವ ಚರ್ಮಗಂಟು ಸೋಂಕಿನಿಂದ 12,800 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ಪ್ರಾಣಿಗಳ ಸಂತೆ, ಅಥವಾ ಜಾತ್ರೆ ನಡೆಸುವುದನ್ನು ನಿಷೇಧಿಸಿದೆ.

ಜೈಪುರ: ರಾಜಸ್ಥಾನದಲ್ಲಿ ಲಂಪಿ ವೈರಸ್‌ನಿಂದ ಉಂಟಾಗುವ ಚರ್ಮಗಂಟು ಸೋಂಕಿನಿಂದ 12,800 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ಪ್ರಾಣಿಗಳ ಸಂತೆ, ಅಥವಾ ಜಾತ್ರೆ ನಡೆಸುವುದನ್ನು ನಿಷೇಧಿಸಿದೆ.

ಆಗಸ್ಟ್ 10 ರವರೆಗೆ ರಾಜ್ಯದಲ್ಲಿ ವರದಿಯಾದ ಒಟ್ಟು ಜಾನುವಾರುಗಳ ಪೈಕಿ ಶ್ರೀ ಗಂಗಾನಗರದಲ್ಲಿ ಗರಿಷ್ಠ 2,511 ಸಾವುಗಳು ವರದಿಯಾಗಿವೆ, ನಂತರ ಬಾರ್ಮರ್‌ನಲ್ಲಿ 1,619, ಜೋಧ್‌ಪುರದಲ್ಲಿ 1,581, ಬಿಕಾನೇರ್‌ನಲ್ಲಿ 1,156, ಜಾಲೋರ್‌ನಲ್ಲಿ 1,150 ಮತ್ತು ಜಾಲೋರ್‌ನಲ್ಲಿ 1,138 ಸಾವುಗಳು ವರದಿಯಾಗಿವೆ.

"ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ರೋಗ ಹರಡುವುದನ್ನು ನಿಯಂತ್ರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಐದು ಜಿಲ್ಲೆಗಳಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ರಾಜಸ್ಥಾನ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಪಿ ಸಿ ಕಿಶನ್ ಅವರು ತಿಳಿಸಿದ್ದಾರೆ.

ಇಲಾಖೆಯ ಪ್ರಕಾರ, ಒಟ್ಟು 2,81,484 ಪ್ರಾಣಿಗಳು ಈ ರೋಗದಿಂದ ಬಳಲುತ್ತಿವೆ ಮತ್ತು 2,41,685 ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗಿದೆ.

ರಾಜ್ಯದಲ್ಲಿ ರೋಗ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ರಾಜಸ್ಥಾನದಲ್ಲಿ ಪ್ರಾಣಿ ಸಂತೆ, ಜಾತ್ರೆ ಆಯೋಜಿಸುವುದನ್ನು ನಿಷೇಧಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಅಲ್ಲದೆ ಮೃತ ಜಾನುವಾರುಗಳ ಸುರಕ್ಷಿತ ವಿಲೇವಾರಿಗೆ ರಾಜ್ಯ ಸರ್ಕಾರವೂ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!