ರಾಹುಲ್ ಗಾಂಧಿ 
ದೇಶ

'ಬ್ಲ್ಯಾಕ್ ಮ್ಯಾಜಿಕ್' ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆ ಗೌರವ ಕಳೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು!

ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ.

ನವದೆಹಲಿ: ಬ್ಲ್ಯಾಕ್ ಮ್ಯಾಜಿಕ್ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವನ್ನು ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ರಾಷ್ಟ್ರದಲ್ಲಿನ ಬೆಲೆ ಏರಿಕೆ ಅಥವಾ ನಿರುದ್ಯೋಗ ಪರಿಸ್ಥಿತಿ ಕಾಣಿಸುತ್ತಿಲ್ಲವೇ? ಎಂದು ರಾಹುಲ್‌ ಪ್ರಶ್ನಿಸಿದ್ದಾರೆ. ಪ್ರಧಾನಿಯಾದವರು ಪ್ರಜೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ರಾಷ್ಟ್ರ ಬಯಸುತ್ತದೆ.

'ಪ್ರಧಾನ ಮಂತ್ರಿ ಅವರೇ ನಿಮ್ಮ ಕರಾಳತನವನ್ನು ಮುಚ್ಚಿಕೊಳ್ಳಲು 'ಬ್ಲ್ಯಾಕ್ ಮ್ಯಾಜಿಕ್' ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆಯುವುದನ್ನು ನಿಲ್ಲಿಸಿ' ಎಂದು ರಾಹುಲ್‌ ಆಗ್ರಹಿಸಿದ್ದಾರೆ.

‘ಆಗಸ್ಟ್ 5 ರಂದು ಬ್ಲ್ಯಾಕ್ ಮ್ಯಾಜಿಕ್ ಮಾಡುವ ಪ್ರಯತ್ನವನ್ನು ನಾವು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರೆ ತಮ್ಮ ಹತಾಶೆ ಅವಧಿ ಮುಗಿಯಲಿದೆ ಎಂದು ಕಾಂಗ್ರೆಸ್ ನವರು ತಿಳಿದುಕೊಂಡಿದ್ದಾರೆ. ಆದರೆ ಅವರು ಎಷ್ಟೇ ಅಬ್ಬರಿಸಿದರೂ, ಎಷ್ಟೇ ಮ್ಯಾಜಿಕ್ ಮಾಡಿದ್ರೂ, ಸಾರ್ವಜನಿಕರ ವಿಶ್ವಾಸವನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಅವರು ಅರಿತಿಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು.

ಕಪ್ಪು ಬಟ್ಟೆ ಧರಿಸಿದರೆ ಅವರ ಕೆಟ್ಟ ದಿನಗಳು ಕೊನೆಯಾಗುತ್ತವೆ ಎಂದು ಭಾವಿಸಿಕೊಂಡಿದ್ದಾರೆ. ಆದರೆ, ಅಂತಹ ಕೃತ್ಯಗಳಿಗೆ, ಮೌಢ್ಯಗಳಿಗೆ ಮೊರೆ ಹೋಗುವುದರಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ' ಎಂದಿದ್ದರು.

ಬೆಲೆ ಏರಿಕೆ ವಿರುದ್ಧ ಆಗಸ್ಟ್‌ 5ರಂದು ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸಂಸದರು, ಶಾಸಕರು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದರು. ಪಾಣಿಪತ್‌ನಲ್ಲಿ 909 ಕೋಟಿ ರೂಪಾಯಿ ವೆಚ್ಚದಲ್ಲಿ 35 ಎಕರೆ ಪ್ರದೇಶದಲ್ಲಿ ಎರಡನೇ ತಲೆಮಾರಿನ (2ಜಿ) ಎಥೆನಾಲ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT