ದೇಶ

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಬವಾಂಕುಳೆ, ಮುಂಬೈ ಘಟಕದ ಮುಖ್ಯಸ್ಥರಾಗಿ ಶೆಲಾರ್ ನೇಮಕ

Vishwanath S

ನವದೆಹಲಿ: ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಚಂದ್ರಶೇಖರ ಬವಾಂಕುಳೆ ಮತ್ತು ಮುಂಬೈ ಘಟಕದ ಅಧ್ಯಕ್ಷರಾಗಿ ಆಶಿಶ್ ಶೆಲಾರ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.

ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಸಮುದಾಯಕ್ಕೆ ಸೇರಿದ ಬವಾಂಕುಳೆ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಮರಾಠಾ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮುಂಬೈ ಘಟಕದ ಅಧ್ಯಕ್ಷರಾಗಿದ್ದ ಮಂಗಲ್ ಪ್ರಭಾತ್ ಲೋಧಾ ಅವರು ಏನಕಾಥ್ ಶಿಂಧೆ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಅವರ ಶೆಲಾರ್ ಅವರನ್ನು ನೇಮಕ ಮಾಡಲಾಗಿದೆ.

2024 ರ ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಒಬಿಸಿ ಮತಗಳನ್ನು ಕ್ರೋಢೀಕರಿಸುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ಬವಾಂಕುಳೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎನ್ನಲಾಗಿದೆ.

SCROLL FOR NEXT