ನಟ ರಣವೀರ್ ಸಿಂಗ್ 
ದೇಶ

ಮುಂಬೈ: ಬೆತ್ತಲೆ ಫೋಟೋಶೂಟ್, ನಟ ರಣವೀರ್ ಸಿಂಗ್ ಗೆ ಪೊಲೀಸ್ ಸಮನ್ಸ್!

ಇತ್ತೀಚಿಗೆ ಬೆತ್ತಲೆ ಫೋಟೋ ಶೂಟ್ ಮಾಡಿಸಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಸಮನ್ಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಂಬೈ: ಇತ್ತೀಚಿಗೆ ಬೆತ್ತಲೆ ಫೋಟೋ ಶೂಟ್ ಮಾಡಿಸಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಸಮನ್ಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ರಣವೀರ್ ಮುಂಬೈಯಿಂದ ಹೊರಗಿದ್ದು, ಆಗಸ್ಟ್ 16 ರಂದು ನಗರಕ್ಕೆ ವಾಪಸ್ಸಾಗಲಿದ್ದಾರೆ. ಆತ ತನಿಖಾ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವುದಾಗಿ ನಟ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಹೊಸ ಮಾಹಿತಿ ಪ್ರಕಾರ ಆಗಸ್ಟ್ 16 ಅಥವಾ ನಂತರ ರಣವೀರ್ ಗೆ ಸಮನ್ಸ್ ನೀಡಲಾಗುತ್ತದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬೆತ್ತಲೆ ಚಿತ್ರಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಜುಲೈ 26 ರಂದು ರಣವೀರ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ನಟನ ವಿರುದ್ಧ ಮುಂಬೈ ಮೂಲದ ಸ್ವಯಂ ಸೇವಾ ಸಂಸ್ಥೆಯೊಂದು  ಚೆಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಇದರ ಆಧಾರದ ಮೇಲೆ ಐಪಿಸಿ ಸೆಕ್ಷನ್ 292, 293, 509 (ಮಹಿಳೆಯರನ್ನು ಅಪಮಾನಿಸಲು ಉದ್ದೇಶದ ಪದ, ಮುಖಭಾವ ಅಥವ ವರ್ತನೆ ಉದ್ದೇಶ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ವಿನಾಯಿತಿಯಡಿ ಸಿಂಗ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಮ್ಯಾಗಜಿನ್ ಗಾಗಿ ಶೂಟ್ ಮಾಡಿಸಲಾದ ಬೆತ್ತಲೆ ಚಿತ್ರವನ್ನು ತನ್ನ ಇನ್ಸ್ಟಾಗ್ರಾಮ್ ನಲ್ಲಿ ಕಳೆದ ಗುರುವಾರ ರಣವೀರ್ ಸಿಂಗ್ ಫೋಸ್ಟ್ ಮಾಡಿದ ನಂತರ ವೈರಲ್ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ