ಪ್ರಧಾನಿ ನರೇಂದ್ರ ಮೋದಿ 
ದೇಶ

ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!

ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ನವದೆಹಲಿ: ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಬಹು ಕ್ರೀಡೆಗಳ ಕ್ರೀಡೂಕೂಟದಲ್ಲಿ  ಸುಮಾರು 200 ಭಾರತೀಯ ಆಥ್ಲೀಟ್ ಗಳು 16 ವಿವಿಧ ಕ್ರೀಡೆಗಳಲ್ಲಿ ಪದಕಗಳಿಗಾಗಿ ಸ್ಪರ್ಧೆ ಮಾಡಿದ್ದರು. ಭಾರತ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕದೊಂದಿಗೆ ಒಟ್ಟಾರೇ 61 ಪದಕ ಗೆಲ್ಲುವುದರೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಕುಸ್ತಿಯಲ್ಲಿಯೇ ಭಾರತ ಹೆಚ್ಚಿನ ಪದಕ ಗಳಿಸಿದೆ. ಆರು ಚಿನ್ನ  ಸೇರಿದಂತೆ 12 ಪದಕಗಳನ್ನು ಕುಸ್ತಿಯಲ್ಲಿಯೇ ಬಂದಿವೆ. ಭಾರ ಎತ್ತುವ ಸ್ಪರ್ಧೆಯಲ್ಲಿ 10 ಪದಕಗಳು ಭಾರತಕ್ಕೆ ಲಭಿಸಿದೆ. 50 ಕೆಜಿ ತೂಕದ ಮಹಿಳೆಯರ ವಿಭಾಗದ ಕುಸ್ತಿ ಪಂದ್ಯದ ಫೈನಲ್ ಪಂದ್ಯದಲ್ಲಿ ಚಿನ್ನ ಪದಕ ಗೆದ್ದ ನಂತರ ಮಾತನಾಡಿದ್ದ ಜರೀನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ ಮತ್ತು ತನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಳ್ಳುತ್ತೇನೆ ಎಂದಿದ್ದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಕಳೆದ ಬಾರಿ ನಾನು ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದೆ ಮತ್ತು ಈಗ ಹೊಸದನ್ನು ಬಯಸುತ್ತೇನೆ. ಕಳೆದ ಬಾರಿ, ನಾನು ನನ್ನ ಟಿ-ಶರ್ಟ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡಿದ್ದೇ. ಈಗ ನಾನು ಅದನ್ನು ನನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು  ಆಗಸ್ಟ್ 07 ರಂದು ಚಿನ್ನ ಗೆದ್ದ ನಂತರ ನಿಕಾತ್ ಜರೀನ್ ಎಎನ್‌ಐಗೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT