ಪ್ರಧಾನಿ ನರೇಂದ್ರ ಮೋದಿ 
ದೇಶ

ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!

ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ನವದೆಹಲಿ: ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ಜುಲೈ 28 ರಿಂದ ಆಗಸ್ಟ್ 8 ರವರೆಗೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಬಹು ಕ್ರೀಡೆಗಳ ಕ್ರೀಡೂಕೂಟದಲ್ಲಿ  ಸುಮಾರು 200 ಭಾರತೀಯ ಆಥ್ಲೀಟ್ ಗಳು 16 ವಿವಿಧ ಕ್ರೀಡೆಗಳಲ್ಲಿ ಪದಕಗಳಿಗಾಗಿ ಸ್ಪರ್ಧೆ ಮಾಡಿದ್ದರು. ಭಾರತ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕದೊಂದಿಗೆ ಒಟ್ಟಾರೇ 61 ಪದಕ ಗೆಲ್ಲುವುದರೊಂದಿಗೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ಕುಸ್ತಿಯಲ್ಲಿಯೇ ಭಾರತ ಹೆಚ್ಚಿನ ಪದಕ ಗಳಿಸಿದೆ. ಆರು ಚಿನ್ನ  ಸೇರಿದಂತೆ 12 ಪದಕಗಳನ್ನು ಕುಸ್ತಿಯಲ್ಲಿಯೇ ಬಂದಿವೆ. ಭಾರ ಎತ್ತುವ ಸ್ಪರ್ಧೆಯಲ್ಲಿ 10 ಪದಕಗಳು ಭಾರತಕ್ಕೆ ಲಭಿಸಿದೆ. 50 ಕೆಜಿ ತೂಕದ ಮಹಿಳೆಯರ ವಿಭಾಗದ ಕುಸ್ತಿ ಪಂದ್ಯದ ಫೈನಲ್ ಪಂದ್ಯದಲ್ಲಿ ಚಿನ್ನ ಪದಕ ಗೆದ್ದ ನಂತರ ಮಾತನಾಡಿದ್ದ ಜರೀನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೇನೆ ಮತ್ತು ತನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಳ್ಳುತ್ತೇನೆ ಎಂದಿದ್ದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಕಳೆದ ಬಾರಿ ನಾನು ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದೆ ಮತ್ತು ಈಗ ಹೊಸದನ್ನು ಬಯಸುತ್ತೇನೆ. ಕಳೆದ ಬಾರಿ, ನಾನು ನನ್ನ ಟಿ-ಶರ್ಟ್‌ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡಿದ್ದೇ. ಈಗ ನಾನು ಅದನ್ನು ನನ್ನ ಬಾಕ್ಸಿಂಗ್ ಗ್ಲೌಸ್‌ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು  ಆಗಸ್ಟ್ 07 ರಂದು ಚಿನ್ನ ಗೆದ್ದ ನಂತರ ನಿಕಾತ್ ಜರೀನ್ ಎಎನ್‌ಐಗೆ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel