ಸಂಗ್ರಹ ಚಿತ್ರ 
ದೇಶ

ಅಟಲ್ ಪಿಂಚಣಿ ಯೋಜನೆ ನಿಯಮ ಬದಲಾವಣೆ; ತೆರಿಗೆದಾರರು ಫಲಾನುಭವಿಯಾಗಲು ಅರ್ಹರಲ್ಲ!

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ಹೌದು.. ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯ (ಎಪಿವೈ ಯೋಜನೆ)) ಹೂಡಿಕೆ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಆದಾಯ ತೆರಿಗೆ ಪಾವತಿಸುವ ಹೂಡಿಕೆದಾರರು 2022ರ ಅಕ್ಟೋಬರ್ 1ರಿಂದ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿರುವುದಿಲ್ಲ. ಒಂದು ವೇಳೆ ಆದಾಯ ತೆರಿಗೆ ಪಾವತಿಸುತ್ತಿರುವ ವ್ಯಕ್ತಿ ಅಕ್ಟೋಬರ್ 1 ಅಥವಾ ಅದರ ನಂತರ ಎಪಿವೈ ಯೋಜನೆಗೆ ಸೇರ್ಪಡೆಗೊಂಡರೆ ಅಂಥ ಖಾತೆಯನ್ನು ಮುಚ್ಚಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಅಕ್ಟೋಬರ್ 1ರಿಂದಲೇ ಅಟಲ್ ಪಿಂಚಣಿ ಯೋಜನೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಆದಾಯ ತೆರಿಗೆ ಕಟ್ಟುವ ಫಲಾನುಭವಿ ಖಾತೆ ಮುಚ್ಚಲ್ಪಡುತ್ತದೆ. ಅಂತೆಯೇ 18 ಹಾಗೂ 40 ವರ್ಷಗಳ ನಡುವಿನ ಭಾರತದ ನಾಗರಿಕರು ಈ ಯೋಜನೆಗೆ ಸೇರ್ಪಡೆಗೊಳ್ಳಬಹುದು ಎನ್ನಲಾಗಿದೆ.

'2022ರ ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ನಾಗರಿಕ ಎಪಿವೈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹನಾಗಿರುವುದಿಲ್ಲ. ಒಂದು ವೇಳೆ ಯಾವುದೇ ಚಂದಾದಾರರು ಅಕ್ಟೋಬರ್ 1 ಅಥವಾ ಅದರ ನಂತರ ಸೇರ್ಪಡೆಗೊಂಡರೆ ಹಾಗೂ ಅವರು ಅರ್ಜಿ ಸಲ್ಲಿಸಿದಾಗ ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬುದು ತಿಳಿದು ಬಂದರೆ ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ. ಆ ದಿನಾಂಕದ ತನಕ ಸಂಗ್ರಹಣೆಗೊಂಡ ಪಿಂಚಣಿಯನ್ನು ಚಂದಾದಾರರಿಗೆ ನೀಡಲಾಗುತ್ತದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಲ್ಲಿಯ ತನಕ 18 ಹಾಗೂ 40 ವರ್ಷಗಳ ನಡುವಿನ ಭಾರತದ ಎಲ್ಲ ನಾಗರಿಕರು ಅವರ ತೆರಿಗೆ ಪಾವತಿ ಸ್ಥಿತಿಗತಿಗಳನ್ನು ಹೊರತುಪಡಿಸಿ ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿದ್ದರು. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಚಂದಾದಾರರ ಕೊಡುಗೆಯ ಶೇ.50ರಷ್ಟನ್ನು ಅಥವಾ ವಾರ್ಷಿಕ 1,000ರೂ. ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡುತ್ತದೆ. ಸರ್ಕಾರದ ಈ ಕೊಡುಗೆ ಇಲ್ಲಿಯ ತನಕ ಇತರ ಸಾಮಾಜಿಕ ಭದ್ರತ ಯೋಜನೆಗಳ ಫಲಾನುಭವಿ ಆಗದಿರುವವರಿಗೆ ಮಾತ್ರ ಲಭಿಸುತ್ತಿತ್ತು. ಅಲ್ಲದೆ, ಇಲ್ಲಿಯ ತನಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಯಾವುದೇ ಷರತ್ತು ಇರಲಿಲ್ಲ. 

ಏನಿದು ಯೋಜನೆ?
ಅನೌಪಚಾರಿಕ ವಲಯದ ಕಾರ್ಮಿಕರಿಗಾಗಿ ಅಟಲ್ ಪಿಂಚಣಿ ಯೋಜನೆಯನ್ನು  (APY scheme) ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಯೋಜನೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ನೀಡುವ ಜೊತೆಗೆ ಅಸಂಘಟಿತ ವಲಯದ ಎಲ್ಲ ನಾಗರಿಕರನ್ನು ಕೇಂದ್ರೀಕರಿಸಿತ್ತು. ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಮೂಲಕ ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತದೆ. ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಚಂದಾದಾರರಿಗೆ ಸರ್ಕಾರ ನಿಗದಿತ ಕನಿಷ್ಠ ಮಾಸಿಕ ಪಿಂಚಣಿ ನೀಡಲಾಗುತ್ತದೆ. ಈ ಪಿಂಚಣಿ ಮೊತ್ತ ತಿಂಗಳಿಗೆ 1,000ರೂ. ಹಾಗೂ 5,000ರೂ. ನಡುವೆ ಇರುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT