ಸಂಗ್ರಹ ಚಿತ್ರ 
ದೇಶ

ಅಟಲ್ ಪಿಂಚಣಿ ಯೋಜನೆ ನಿಯಮ ಬದಲಾವಣೆ; ತೆರಿಗೆದಾರರು ಫಲಾನುಭವಿಯಾಗಲು ಅರ್ಹರಲ್ಲ!

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ಹೌದು.. ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯ (ಎಪಿವೈ ಯೋಜನೆ)) ಹೂಡಿಕೆ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಆದಾಯ ತೆರಿಗೆ ಪಾವತಿಸುವ ಹೂಡಿಕೆದಾರರು 2022ರ ಅಕ್ಟೋಬರ್ 1ರಿಂದ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿರುವುದಿಲ್ಲ. ಒಂದು ವೇಳೆ ಆದಾಯ ತೆರಿಗೆ ಪಾವತಿಸುತ್ತಿರುವ ವ್ಯಕ್ತಿ ಅಕ್ಟೋಬರ್ 1 ಅಥವಾ ಅದರ ನಂತರ ಎಪಿವೈ ಯೋಜನೆಗೆ ಸೇರ್ಪಡೆಗೊಂಡರೆ ಅಂಥ ಖಾತೆಯನ್ನು ಮುಚ್ಚಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಅಕ್ಟೋಬರ್ 1ರಿಂದಲೇ ಅಟಲ್ ಪಿಂಚಣಿ ಯೋಜನೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಆದಾಯ ತೆರಿಗೆ ಕಟ್ಟುವ ಫಲಾನುಭವಿ ಖಾತೆ ಮುಚ್ಚಲ್ಪಡುತ್ತದೆ. ಅಂತೆಯೇ 18 ಹಾಗೂ 40 ವರ್ಷಗಳ ನಡುವಿನ ಭಾರತದ ನಾಗರಿಕರು ಈ ಯೋಜನೆಗೆ ಸೇರ್ಪಡೆಗೊಳ್ಳಬಹುದು ಎನ್ನಲಾಗಿದೆ.

'2022ರ ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ನಾಗರಿಕ ಎಪಿವೈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹನಾಗಿರುವುದಿಲ್ಲ. ಒಂದು ವೇಳೆ ಯಾವುದೇ ಚಂದಾದಾರರು ಅಕ್ಟೋಬರ್ 1 ಅಥವಾ ಅದರ ನಂತರ ಸೇರ್ಪಡೆಗೊಂಡರೆ ಹಾಗೂ ಅವರು ಅರ್ಜಿ ಸಲ್ಲಿಸಿದಾಗ ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬುದು ತಿಳಿದು ಬಂದರೆ ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ. ಆ ದಿನಾಂಕದ ತನಕ ಸಂಗ್ರಹಣೆಗೊಂಡ ಪಿಂಚಣಿಯನ್ನು ಚಂದಾದಾರರಿಗೆ ನೀಡಲಾಗುತ್ತದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಲ್ಲಿಯ ತನಕ 18 ಹಾಗೂ 40 ವರ್ಷಗಳ ನಡುವಿನ ಭಾರತದ ಎಲ್ಲ ನಾಗರಿಕರು ಅವರ ತೆರಿಗೆ ಪಾವತಿ ಸ್ಥಿತಿಗತಿಗಳನ್ನು ಹೊರತುಪಡಿಸಿ ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿದ್ದರು. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಚಂದಾದಾರರ ಕೊಡುಗೆಯ ಶೇ.50ರಷ್ಟನ್ನು ಅಥವಾ ವಾರ್ಷಿಕ 1,000ರೂ. ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡುತ್ತದೆ. ಸರ್ಕಾರದ ಈ ಕೊಡುಗೆ ಇಲ್ಲಿಯ ತನಕ ಇತರ ಸಾಮಾಜಿಕ ಭದ್ರತ ಯೋಜನೆಗಳ ಫಲಾನುಭವಿ ಆಗದಿರುವವರಿಗೆ ಮಾತ್ರ ಲಭಿಸುತ್ತಿತ್ತು. ಅಲ್ಲದೆ, ಇಲ್ಲಿಯ ತನಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಯಾವುದೇ ಷರತ್ತು ಇರಲಿಲ್ಲ. 

ಏನಿದು ಯೋಜನೆ?
ಅನೌಪಚಾರಿಕ ವಲಯದ ಕಾರ್ಮಿಕರಿಗಾಗಿ ಅಟಲ್ ಪಿಂಚಣಿ ಯೋಜನೆಯನ್ನು  (APY scheme) ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಯೋಜನೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ನೀಡುವ ಜೊತೆಗೆ ಅಸಂಘಟಿತ ವಲಯದ ಎಲ್ಲ ನಾಗರಿಕರನ್ನು ಕೇಂದ್ರೀಕರಿಸಿತ್ತು. ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಮೂಲಕ ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತದೆ. ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಚಂದಾದಾರರಿಗೆ ಸರ್ಕಾರ ನಿಗದಿತ ಕನಿಷ್ಠ ಮಾಸಿಕ ಪಿಂಚಣಿ ನೀಡಲಾಗುತ್ತದೆ. ಈ ಪಿಂಚಣಿ ಮೊತ್ತ ತಿಂಗಳಿಗೆ 1,000ರೂ. ಹಾಗೂ 5,000ರೂ. ನಡುವೆ ಇರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT