ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು

ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ...

ಕೊರ್ಬಾ: ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಕಾರ್ಮಿಕನನ್ನು ಸುಮನ್ ತಿಗ್ಗಾ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ಪ್ರತೀಕ್ಷಾ ಬಸ್ ನಿಲ್ದಾಣದಲ್ಲಿ ಮತ್ತೊಬ್ಬ ಕಾರ್ಮಿಕನೊಂದಿಗೆ ರಾಷ್ಟ್ರಧ್ವಜವನ್ನು ಕಟ್ಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮಣೇಂದ್ರಗಢ ಉಪವಿಭಾಗೀಯ ಪೊಲೀಸ್ ಅಧಿಕಾರಿ(ಎಸ್‌ಡಿಒಪಿ) ರಾಕೇಶ್ ಕುರ್ರೆ ಅವರು ಹೇಳಿದ್ದಾರೆ.

"ಘಟನೆಯಲ್ಲಿ ಸುಮನ್ ತಿಗ್ಗಾ ಸಹೋದ್ಯೋಗಿ ರಾಮಕೃಪಾಲ್ ಸಿಂಗ್ (35) ಸಹ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಮಿಕರ ಸಂಘ ತಿಗ್ಗಾ ಸಾವಿನ ನಂತರ ಪ್ರತಿಭಟನೆ ನಡೆಸಿದ್ದು, ಮೃತನ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ" ಎಂದು ಕುರ್ರೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!

ಭಾರತಕ್ಕೆ 'ಸೇವಾ ಉತ್ಪಾದನಾ ಸೂಚ್ಯಂಕ' (ISP) ಏಕೆ ಅಗತ್ಯ? (ಹಣಕ್ಲಾಸು)