ಪ್ರಾತಿನಿಧಿಕ ಚಿತ್ರ 
ದೇಶ

ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ: ದೇಶದಲ್ಲಿ ಸೋಂಕಿತರ ಸಂಖ್ಯೆ 10

ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.

ನವದೆಹಲಿ: ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಇದೀಗ ಒಟ್ಟು 10 ಜನರು ಮಂಕಿಪಾಕ್ಸ್ ಕಾಯಿಲೆಗೆ ತುತ್ತಾಗಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಪೈಕಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ತಂಡವು ರೋಗಿಗೆ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ಡಾ. ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು, ರೋಗಕ್ಕೆ ತುತ್ತಾಗುವುದನ್ನು ತಪ್ಪಿಸಲು ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲದ ಅಥವಾ ಪುನರಾವರ್ತಿತ ಸಂಪರ್ಕ ಹೊಂದಿದರೆ ಸೋಂಕು ತಗುಲಬಹುದು ಎಂದೂ ಅದು ಹೇಳಿದೆ.

ರೋಗ ಹರಡದಂತೆ ಸೋಂಕಿತ ವ್ಯಕ್ತಿಯನ್ನು ಇತರರಿಂದ ಪ್ರತ್ಯೇಕಿಸಲು, ಹ್ಯಾಂಡ್ ಸ್ಯಾನಿಟೈಸರ್ ಬಳಕೆ, ಸಾಬೂನು ಮತ್ತು ನೀರಿನಿಂದ ಕೈಗಳನ್ನು ತೊಳೆಯುವುದು, ಮಾಸ್ಕ್‌ಗಳಿಂದ ಬಾಯಿಯನ್ನು ಮುಚ್ಚುವುದು, ರೋಗಿಯ ಹತ್ತಿರ ಇರುವಾಗ ಬಿಸಾಡಬಹುದಾದ ಕೈಗವಸುಗಳಿಂದ ಕೈಗಳನ್ನು ಬಳಸುವುದು ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕಗಳನ್ನು ಬಳಸಬೇಕೆಂದು ಸಚಿವಾಲಯ ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ