ಪ್ರಾತಿನಿಧಿಕ ಚಿತ್ರ 
ದೇಶ

ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ: ದೇಶದಲ್ಲಿ ಸೋಂಕಿತರ ಸಂಖ್ಯೆ 10

ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.

ನವದೆಹಲಿ: ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಇದೀಗ ಒಟ್ಟು 10 ಜನರು ಮಂಕಿಪಾಕ್ಸ್ ಕಾಯಿಲೆಗೆ ತುತ್ತಾಗಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಪೈಕಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ತಂಡವು ರೋಗಿಗೆ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ಡಾ. ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು, ರೋಗಕ್ಕೆ ತುತ್ತಾಗುವುದನ್ನು ತಪ್ಪಿಸಲು ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲದ ಅಥವಾ ಪುನರಾವರ್ತಿತ ಸಂಪರ್ಕ ಹೊಂದಿದರೆ ಸೋಂಕು ತಗುಲಬಹುದು ಎಂದೂ ಅದು ಹೇಳಿದೆ.

ರೋಗ ಹರಡದಂತೆ ಸೋಂಕಿತ ವ್ಯಕ್ತಿಯನ್ನು ಇತರರಿಂದ ಪ್ರತ್ಯೇಕಿಸಲು, ಹ್ಯಾಂಡ್ ಸ್ಯಾನಿಟೈಸರ್ ಬಳಕೆ, ಸಾಬೂನು ಮತ್ತು ನೀರಿನಿಂದ ಕೈಗಳನ್ನು ತೊಳೆಯುವುದು, ಮಾಸ್ಕ್‌ಗಳಿಂದ ಬಾಯಿಯನ್ನು ಮುಚ್ಚುವುದು, ರೋಗಿಯ ಹತ್ತಿರ ಇರುವಾಗ ಬಿಸಾಡಬಹುದಾದ ಕೈಗವಸುಗಳಿಂದ ಕೈಗಳನ್ನು ಬಳಸುವುದು ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲು ಸೋಂಕು ನಿವಾರಕಗಳನ್ನು ಬಳಸಬೇಕೆಂದು ಸಚಿವಾಲಯ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT