ಸಿಜೆಐ ಎನ್ ವಿ ರಮಣ 
ದೇಶ

ಸುಪ್ರೀಂಕೋರ್ಟ್ ಸಂವಿಧಾನದ ರಕ್ಷಕ: ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ

 ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗವು ಸಾಂವಿಧಾನಿಕ ನಂಬಿಕೆಯ  'ಸಮಾನ ಭಂಡಾರಗಳು' ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಸೋಮವಾರ ಹೇಳಿದ್ದಾರೆ

ನವದೆಹಲಿ:  ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗವು ಸಾಂವಿಧಾನಿಕ ನಂಬಿಕೆಯ  'ಸಮಾನ ಭಂಡಾರಗಳು' ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಸೋಮವಾರ ಹೇಳಿದ್ದಾರೆ ಮತ್ತು ನ್ಯಾಯ ನೀಡಿಕೆ ನ್ಯಾಯಾಲಯಗಳ ಜವಾಬ್ದಾರಿಯಾಗಿದೆ ಎಂಬ ಕಲ್ಪನೆಯನ್ನು ಸಂವಿಧಾನ ಹೊರಹಾಕುತ್ತದೆ ಎಂದಿದ್ದಾರೆ. 

ಸುಪ್ರೀಂ ಕೋರ್ಟ್ ಆವರಣದಲ್ಲಿ 75ನೇ  ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ನೀತಿಯ ನಿರ್ದೇಶನ ತತ್ವಗಳ ಕುರಿತು ಸಂವಿಧಾನದ 38 ನೇ ವಿಧಿಯನ್ನು ಉಲ್ಲೇಖಿಸಿ, ಸಾಮಾಜಿಕ ಸುವ್ಯವಸ್ಥೆಯನ್ನು ಭದ್ರಪಡಿಸುವುದು ರಾಜ್ಯದ ಜವಾಬ್ದಾರಿಯಾಗಿದೆ ಎಂದು ಹೇಳಿದರು. 

ಸಾಂವಿಧಾನಿಕ ಚೌಕಟ್ಟಿನಡಿಯಲ್ಲಿ, ಪ್ರತಿಯೊಂದು ಅಂಗಕ್ಕೂ ಒಂದು ಬಾಧ್ಯತೆ ನೀಡಲಾಗಿದೆ ಮತ್ತು ನ್ಯಾಯವು ನ್ಯಾಯಾಲಯಗಳ ಏಕೈಕ ಜವಾಬ್ದಾರಿಯಾಗಿದೆ ಎಂಬ ಕಲ್ಪನೆಯನ್ನು ಭಾರತೀಯ ಸಂವಿಧಾನದ 38 ನೇ ವಿಧಿಯಲ್ಲಿ ಹೇಳಲಾಗಿದೆ. ರಾಜ್ಯಗಳು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಒದಗಿಸುವುದನ್ನು ಸಂವಿಧಾನ ಕಡ್ಡಾಪಡಿಸಿದೆ ಎಂದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ - ಸಾಂವಿಧಾನಿಕ ನಂಬಿಕೆಯ ಸಮಾನ ಭಂಡಾರಗಳು,  ವಿವಾದಗಳನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಾಗರಿಕರಿಗೆ ಶಕ್ತಿ ನೀಡುತ್ತದೆ ಮತ್ತು ವಿಷಯಗಳು ತಪ್ಪಾದಾಗ ಅದು ತಮ್ಮೊಂದಿಗೆ ನಿಲ್ಲುತ್ತದೆ ಎಂಬುದು ಅವರಿಗೆ ಗೊತ್ತಿದೆ ಎಂದು ಅವರು ಹೇಳಿದರು. 

ನ್ಯಾಯಾಂಗ ವ್ಯವಸ್ಥೆಯು ಲಿಖಿತ ಸಂವಿಧಾನದ ಬದ್ಧತೆಯಿಂದ ಸಾಗುತ್ತದೆ ಮತ್ತು ಜನರಲ್ಲಿ ಅಪಾರ ನಂಬಿಕೆಯನ್ನು ಹೊಂದಿದೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT