ಪ್ರಧಾನಿ ಮೋದಿ 
ದೇಶ

Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ  ಬಳಕೆ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ  ಬಳಕೆ ಮಾಡಿದ್ದಾರೆ.

ಹೌದು.. ಪ್ರಧಾನಿ ಭಾಷಣದಲ್ಲಿ ಇಂದು ಒಂದು ವ್ಯತ್ಯಾಸ ಮುಖ್ಯವಾಗಿ ಎದ್ದು ಕಂಡಿದ್ದು, ಮೋದಿ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳಲ್ಲಿ ಬರೆದಿದ್ದ ಅಂಶಗಳನ್ನು ಆಧರಿಸಿ ಅವರು ಭಾಷಣ ಮಾಡಿದರು. ಈ ಹಿಂದಿನ ಭಾಷಣಗಳಲ್ಲಿ ಮೋದಿ ಅವರು ಟೆಲಿಪ್ರಾಂಪ್ಟರ್ ಬಳಕೆ ಮಾಡುತ್ತಿದ್ದರು. ನೋಡುವವರಿಗೆ ಅವರು ನೇರವಾಗಿ ತಮ್ಮನ್ನೇ ನೋಡುತ್ತಾ ಮಾತನಾಡುತ್ತಿದ್ದಾರೆ ಎನಿಸುವಂತೆ ಇರುತ್ತಿತ್ತು. ಆದರೆ ಈ ಬಾರಿ ಅವರು ಆಗಾಗ ಕಾಗದದ ಚೀಟಿಗಳನ್ನು ನೋಡುತ್ತಾ, ಭಾಷಣ ಮುಂದುವರಿಸಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಬ್ಯಾನರ್ ಅಡಿಯಲ್ಲಿ ದೇಶದಲ್ಲಿ ಆಚರಿಸಲಾಗುತ್ತಿರುವ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ಟೆಲಿಪ್ರಾಂಪ್ಟರ್ ಅನ್ನು ಪಕ್ಕಕ್ಕೆ ಹಾಕಲಾಯಿತು. 

ಗಮನ ಸೆಳೆದ ಮೋದಿ ವಸ್ತ್ರ
ರಾಷ್ಟ್ರೀಯ ಧ್ವಜದ ಚಿತ್ರವಿರುವ ಪೇಟ, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ನೆಹರೂ ಜಾಕೆಟ್ ತೊಟ್ಟು ಮೋದಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಮೋದಿಯವರ ಬಿಳಿ ಕುರ್ತಾ ಮತ್ತು ನೀಲಿ ಜಾಕೆಟ್‌ ಹಾಗೂ ಅದಕ್ಕೊಪ್ಪುವ ವಿಶೇಷ ವಿನ್ಯಾಸದ ಪೇಟ ಗಮನ ಸೆಳೆಯಿತು. ಸ್ವಾತಂತ್ರ್ಯ ದಿನಾಚರಣೆಯ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಉಡುಪುಗಳು ಯಾವಾಗಲೂ ರಾಷ್ಟ್ರದ ಗಮನವನ್ನು ಸೆಳೆಯುತ್ತವೆ.

ಈ ವರ್ಷ ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಸಾಂಪ್ರದಾಯಿಕ ಕುರ್ತಾ ಮತ್ತು ನೀಲಿ ಜಾಕೆಟ್ ಮತ್ತು ಪೇಟವನ್ನು ಧರಿಸಿದ್ದರು. ಐತಿಹಾಸಿಕ ಕೆಂಪು ಕೋಟೆಯ ಮೇಲೆ ಮೋದಿ ‘ತಿರಂಗ’ ಧ್ವಜವನ್ನು ಹಾರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಸ್ವಾಗತಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT