ರಾಜಸ್ಥಾನ ಕಾಂಗ್ರೆಸ್ ಶಾಸಕ 
ದೇಶ

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜಸ್ಥಾನ ಕಾಂಗ್ರೆಸ್ ಶಾಸಕ ರಾಜೀನಾಮೆ 

ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘ್ ವಾಲ್ ತಮ್ಮ ರಾಜೀನಾಮೆಯನ್ನು ಸಿಎಂ ಅಶೋಕ್ ಗೆಹ್ಲೋಟ್ ಗೆ ಸಲ್ಲಿಸಿದ್ದಾರೆ.

ಜೈಪುರ: ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘ್ ವಾಲ್ ತಮ್ಮ ರಾಜೀನಾಮೆಯನ್ನು ಸಿಎಂ ಅಶೋಕ್ ಗೆಹ್ಲೋಟ್ ಗೆ ಸಲ್ಲಿಸಿದ್ದಾರೆ.

ತಮ್ಮ ಸಮುದಾಯವನ್ನು ರಕ್ಷಿಸಲು ಸಾಧ್ಯವಾಗದೇ ಇದ್ದಲ್ಲಿ ತಮಗೆ ಶಾಸಕನಾಗಿ ಮುಂದುವರೆಯುವ ಹಕ್ಕು ಇರುವುದಿಲ್ಲ ಎಂದು ಪನಾ ಚಂದ್ ಮೇಘ್ ವಾಲ್ ಹೇಳಿದ್ದಾರೆ.

9 ವರ್ಷದ ದಲಿತ ಬಾಲಕ ನೀರಿನ ಕುಡಿಯುವ ನೀರಿನ ಮಡಕೆ ಮುಟ್ಟಿದ ಎಂಬುದಕ್ಕಾಗಿ ಶಾಲಾ ಶಿಕ್ಷಕರೊಬ್ಬರು ಆತನನ್ನು ಹೊಡೆದಿದ್ದರು ಪರಿಣಾಮ ಬಾಲಕ ಮೃತಪಟ್ಟಿದ್ದ. ಈ ಘಟನೆಯಾದ 2 ದಿನಗಳ ಬೆನ್ನಲ್ಲೇ ಶಾಸಕ ಪನಾ ಚಂದ್ ಮೇಘ್ ವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಮ್ಮ ಸಮುದಾಯದ ರಕ್ಷಣೆ ಸಾಧ್ಯವಾಗದೇ ಇದ್ದಲ್ಲಿ, ನಮಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇರುವುದಿಲ್ಲ.ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಯಾವುದೇ ಹುದ್ದೆ ಇಲ್ಲದೆಯೂ ನಾವು ಜನರ ಸೇವೆ ಮಾಡಬಹುದು ಎಂದು ಮೇಘ್ ವಾಲ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT