ಭದ್ರತಾ ಪಡೆಗಳು 
ದೇಶ

ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರಿಂದ ಗುಂಡಿನ ದಾಳಿ, ಓರ್ವ ಸಾವು

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಸುನೀಲ್ ಕುಮಾರ್ ಮೃತಪಟ್ಟಿದ್ದು, ಪಿಂಟು ಕುಮಾರ್ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯ ಚೊಟಿಪೊರಾ ಪ್ರದೇಶದ ಸೇಬಿನ ತೋಟವೊಂದರಲ್ಲಿ ಉಗ್ರರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ರವಾನಿಸಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್ ವಕ್ತಾರರೊಬ್ಬರು ಹೇಳಿದ್ದಾರೆ.

ಕಳೆದ ವಾರದಿಂದ ಕಾಶ್ಮೀರ ಕಣಿವೆಯಲ್ಲಿ ಉಗ್ರರು ದಾಳಿಯನ್ನು ತೀವ್ರಗೊಳಿಸಿದ್ದು, ಭಾನುವಾರ ನೌವಾಟದಲ್ಲಿ ಪೊಲೀಸರೊಬ್ಬರು ಸಾವನ್ನಪ್ಪಿದ್ದರು. ಕಳೆದ ವಾರ ಬಂಡಿಪೊರಾದಲ್ಲಿ ವಲಸಿಗ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಸೋಮವಾರ ಬುದ್ಗಾಮ್ ಮತ್ತು ಶ್ರೀನಗರ ಜಿಲ್ಲೆಯಲ್ಲಿ ಎರಡು ಗ್ರೇನೆಡ್ ದಾಳಿ ನಡೆಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT