ಕೇಟರಿಂಗ್ ವ್ಯವಸ್ಥಾಪಕನಿಗೆ ಶಿವಸೇನೆ ಶಾಸಕನಿಂದ ಕಪಾಳ ಮೋಕ್ಷ 
ದೇಶ

ಕಾರ್ಮಿಕರಿಗೆ ಕಳಪೆ ಆಹಾರದ ಆರೋಪ: ಕೇಟರಿಂಗ್ ಮ್ಯಾನೇಜರ್ ಗೆ ಶಿವಸೇನೆ ಶಾಸಕನಿಂದ ಕಪಾಳಮೋಕ್ಷ! 

ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಮುಂಬೈ: ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
    
ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಸೆನೆಯ ಶಾಸಕ ಈ ರೀತಿ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಆಹಾರದ ಬಗ್ಗೆ ಪ್ರಶ್ನಿಸುವಾಗ ಬಂಗಾರ್ ಅವರು ಎರಡು ಬಾರಿ ಕೆನ್ನೆಗೆ ಹೊಡೆದಿರುವುದು ವೈರಲ್ ಆಗತೊಡಗಿದೆ.

ಈ ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಬಂಗಾರ್, ಮಿಡ್ ಡೇ ಮೀಲ್ಸ್ ಯೋಜನೆಯ ಆಹಾರವನ್ನು ಕಳಪೆ ಗುಣಮಟ್ಟದ ಸರಕುಗಳಿಂದ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. 

ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕರು, ಇದು ಅನುದಾನಗಳನ್ನು ಲೂಟಿ ಹೊಡೆಯುತ್ತಿರುವ ಸರ್ಕಾರವಾಗಿದ್ದು, ಜನರ ಜೀವದೊಂದಿಗೆ ಆಟವಾಡುತ್ತಿದೆ.  ರಾಜ್ಯ ಸರ್ಕಾರ ಈ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಏಕನಾಥ್ ಶಿಂಧೆ ಬಣದ ಶಾಸಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT