ಕೇಟರಿಂಗ್ ವ್ಯವಸ್ಥಾಪಕನಿಗೆ ಶಿವಸೇನೆ ಶಾಸಕನಿಂದ ಕಪಾಳ ಮೋಕ್ಷ 
ದೇಶ

ಕಾರ್ಮಿಕರಿಗೆ ಕಳಪೆ ಆಹಾರದ ಆರೋಪ: ಕೇಟರಿಂಗ್ ಮ್ಯಾನೇಜರ್ ಗೆ ಶಿವಸೇನೆ ಶಾಸಕನಿಂದ ಕಪಾಳಮೋಕ್ಷ! 

ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಮುಂಬೈ: ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
    
ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಸೆನೆಯ ಶಾಸಕ ಈ ರೀತಿ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಆಹಾರದ ಬಗ್ಗೆ ಪ್ರಶ್ನಿಸುವಾಗ ಬಂಗಾರ್ ಅವರು ಎರಡು ಬಾರಿ ಕೆನ್ನೆಗೆ ಹೊಡೆದಿರುವುದು ವೈರಲ್ ಆಗತೊಡಗಿದೆ.

ಈ ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಬಂಗಾರ್, ಮಿಡ್ ಡೇ ಮೀಲ್ಸ್ ಯೋಜನೆಯ ಆಹಾರವನ್ನು ಕಳಪೆ ಗುಣಮಟ್ಟದ ಸರಕುಗಳಿಂದ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. 

ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕರು, ಇದು ಅನುದಾನಗಳನ್ನು ಲೂಟಿ ಹೊಡೆಯುತ್ತಿರುವ ಸರ್ಕಾರವಾಗಿದ್ದು, ಜನರ ಜೀವದೊಂದಿಗೆ ಆಟವಾಡುತ್ತಿದೆ.  ರಾಜ್ಯ ಸರ್ಕಾರ ಈ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಏಕನಾಥ್ ಶಿಂಧೆ ಬಣದ ಶಾಸಕ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT