ಶ್ರೀಕಾಂತ್ ತ್ಯಾಗಿ 
ದೇಶ

ವಂಚನೆ ಪ್ರಕರಣ: ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿಗೆ ಜಾಮೀನು ನಿರಾಕರಿಸಿದ ಕೋರ್ಟ್

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ನೋಯ್ಡಾ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಆದಾಗ್ಯೂ, ತ್ಯಾಗಿ ಅವರು ನೋಯ್ಡಾದಿಂದ ತಲೆಮರೆಸಿಕೊಂಡಿದ್ದ ವೇಳೆ ಅವರಿಗೆ ಆಶ್ರಯ ನೀಡಿದ ಆರೋಪ ಮೇಲೆ ಬಂಧನಕ್ಕೊಳಗಾಗಿದ್ದ ಅವರ ಇಬ್ಬರು ಸಹಾಯಕರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ.

ತ್ಯಾಗಿ ಅವರು ಆಗಸ್ಟ್ 5 ರಂದು ನೋಯ್ಡಾದಲ್ಲಿ ತಮ್ಮ ಹೌಸಿಂಗ್ ಸೊಸೈಟಿಯ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಮತ್ತು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿದ್ದಾರೆ.

ಘಟನೆಯ ನಂತರ ನಾಲ್ಕು ದಿನಗಳ ಕಾಲ ತಲೆಮರೆಸಿಕೊಂಡಿದ್ದ ತ್ಯಾಗಿ ಅವರನ್ನು ಆಗಸ್ಟ್ 9 ರಂದು ಮೀರತ್‌ನಲ್ಲಿ ಬಂಧಿಸಲಾಗಿತ್ತು.

ತ್ಯಾಗಿ ಅವರು ಅಕ್ರಮವಾಗಿ ಉತ್ತರ ಪ್ರದೇಶ ಶಾಸಕರ ಸ್ಟಿಕ್ಕರ್ ಮತ್ತು ಸರ್ಕಾರಿ ಚಿಹ್ನೆಯನ್ನು ಹೊಂದಿರುವ ಕಾರುಗಳನ್ನು ಬಳಸುತ್ತಿರುವುದು ಕಂಡುಬಂದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 419 (ಸೋಗು ಹಾಕುವ ಮೂಲಕ ವಂಚನೆ), 420 (ವಂಚನೆ) ಮತ್ತು 482 ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT