ಸಾಂದರ್ಭಿಕ ಚಿತ್ರ 
ದೇಶ

ಪಾನೀಯದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಹುಟ್ಟುಹಬ್ಬದ ಪಾರ್ಟಿಯ ನಂತರ 19 ವರ್ಷದ ಯುವತಿಯ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಾಜಿಯಾಬಾದ್: ಹುಟ್ಟುಹಬ್ಬದ ಪಾರ್ಟಿಯ ನಂತರ 19 ವರ್ಷದ ಯುವತಿಯ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯು ಭಾನುವಾರ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಯಾರೋ ಅವರಿಗೆ ಮತ್ತು ಬರುವ ಪದಾರ್ಥವನ್ನು ಬೆರೆಸಿದ ಪಾನೀಯವನ್ನು ನೀಡಿದ್ದಾರೆ ಎಂದು ಅವರು ಹೇಳಿದರು.

ಇದಾದ ನಂತರ, ಒಬ್ಬ ವ್ಯಕ್ತಿ ಆಕೆಯನ್ನು ಕೋಣೆಗೆ ಕರೆದೊಯ್ದಿದ್ದಾನೆ ಮತ್ತು ತನ್ನ ಸ್ನೇಹಿತರನ್ನೂ ಕರೆದಿದ್ದಾನೆ. ಬಳಿಕ ಅವರೆಲ್ಲರೂ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಲ್ಪ ಹೊತ್ತಿನ ನಂತರ ಯುವತಿಗೆ ಪ್ರಜ್ಞೆ ಬಂದು ಕೃತ್ಯವನ್ನು ವಿರೋಧಿಸಿದಾಗ, ಅವರು ಆಕೆಯನ್ನು ಥಳಿಸಿದ್ದಾರೆ. ಈ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯು ತನ್ನ ಮನೆಗೆ ಬಂದು ಕುಟುಂಬಸ್ಥರಿಗೆ ವಿಚಾರವನ್ನು ತಿಳಿಸಿದ್ದಾಳೆ. ಸೋಮವಾರ ಆಕೆ ತನ್ನ ತಂದೆಯೊಂದಿಗೆ ಮೋದಿ ನಗರ ಪೊಲೀಸ್ ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದ್ದಾಳೆ.

ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಎಲ್ಲಾ ಮೂವರು ಆರೋಪಿಗಳನ್ನು ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂದು ಗುರುತಿಸಲಾಗಿದೆ ಎಂದು ಗ್ರಾಮೀಣ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಇರಾಜ್ ರಾಜಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!