ಭೀಮ್ ಆರ್ಮಿ ಮುಖ್ಯಸ್ಥ 
ದೇಶ

ಜೋಧ್ ಪುರ ವಿಮಾನ ನಿಲ್ದಾಣದಲ್ಲಿ 3 ಗಂಟೆಗಳ ಕಾಲ ಭೀಮ್ ಆರ್ಮಿ ಮುಖ್ಯಸ್ಥನಿಗೆ ದಿಗ್ಬಂಧನ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ 3 ಗಂಟೆಗಳ ಕಾಲ ಬಂಧಿಸಿಡಲಾಗಿತ್ತು.

ಜೋಧ್ ಪುರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ 3 ಗಂಟೆಗಳ ಕಾಲ ಬಂಧಿಸಿಡಲಾಗಿತ್ತು. 

ರಾಜಸ್ಥಾನದಲ್ಲಿ ಶಾಲಾ ಶಿಕ್ಷಕರ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದ ದಲಿತ ಬಾಲಕನ ಕುಟುಂಬವನ್ನು ಭೇಟಿ ಮಾಡುವುದಕ್ಕಾಗಿ ಚಂದ್ರಶೇಖರ್ ಆಜಾದ್ ಅವರು ಜಲೋರ್ ಗೆ ತೆರಳುತ್ತಿದ್ದರು.

ವಿಮಾನ ನಿಲ್ದಾಣದಿಂದ 150 ಕಿ.ಮೀ ದೂರವಿರುವ ಜಲೋರ್ ಗೆ ಹೋಗುವುದಿಲ್ಲ ಎಂಬ ಭರವಸೆ ನೀಡಿದ ಬಳಿಕವಷ್ಟೇ ಅವರನ್ನು ಸಂಜೆ 7:30 ರ ವೇಳೆಗೆ ವಿಮಾನ ನಿಲ್ದಾಣದಿಂದ ಹೊರಡಲು ಅನುಮತಿ ನೀಡಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆಯೇ ಪತ್ರಕರ್ತರೊಂದಿಗೆ ಮಾತನಾಡಿದ ಚಂದ್ರಶೇಖರ್, ನಾನು ಕುಟುಂಬ ಸದಸ್ಯರನ್ನು ಭೇಟಿ ಮಾಡದೇ ವಾಪಸ್ಸಾಗುವುದಿಲ್ಲ ಎಂದು ಹೇಳಿದರು.

ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಸುರಾನ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂದ್ರ ಮೇಘ್ ವಾಲ್ ಎಂಬ ವಿದ್ಯಾರ್ಥಿ ನೀರಿನ ಮಡಿಕೆಯನ್ನು ಮುಟ್ಟಿದ ಎಂಬ ಕಾರಣಕ್ಕಾಗಿ ಆತನನ್ನು ಶಿಕ್ಷಕರೇ ಥಳಿಸಿದ್ದರು. ಥಳಿತದ ತೀವ್ರತೆಗೆ ಗಾಯಗೊಂಡ ವಿದ್ಯಾರ್ಥಿ ಅಹ್ಮದಾಬಾದ್ ನ ಆಸ್ಪತ್ರೆಯಲ್ಲಿ ಆ.13 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT