ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ 
ದೇಶ

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್

ತೆಲಂಗಾಣ ರಾಷ್ಚ್ಪೀಯ ಸಮಿತಿ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಹೈದರಾಬಾದ್: ತೆಲಂಗಾಣ ರಾಷ್ಚ್ಪೀಯ ಸಮಿತಿ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

2014 ರಲ್ಲಿ ರಚಿಸಲಾದ ಹೊಸ ರಾಜ್ಯದಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ 2016 ರಲ್ಲಿ ರಚನೆಯಾದ ನೈರುತ್ಯ ತೆಲಂಗಾಣದ ಹೊಸ ಜಿಲ್ಲೆ ವಿಕಾರಾಬಾದ್‌ನಲ್ಲಿ ಹೊಸ ಕಲೆಕ್ಟರೇಟ್ ಸಂಕೀರ್ಣವನ್ನು ಸಿಎಂ ಕೆಸಿಆರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾವ್, 'ತೆಲಂಗಾಣ ಮತದಾರರು “ಬಿಜೆಪಿ ಧ್ವಜಗಳಿಗೆ ಮೋಸ ಹೋಗಬೇಡಿ” ಎಂದು ತೆಲಂಗಾಣ ಮತದಾರರನ್ನು ಕೇಳಿಕೊಂಡರು.ರಾಜ್ಯವು ಪಶ್ಚಿಮ ತೆಲಂಗಾಣದ ಮುನುಗೋಡೆಯಲ್ಲಿ ಮತ್ತೊಂದು ಉಪಚುನಾವಣೆಗೆ ತಯಾರಿ ನಡೆಸುತ್ತಿದ್ದು, ಹಾಲಿ ಕಾಂಗ್ರೆಸ್ ಶಾಸಕ ರಾಜಗೋಪಾಲ್ ರೆಡ್ಡಿ ಈ ಸ್ಪರ್ಧಾಕಣದಲ್ಲಿ ಇದ್ದಾರೆ. ಪ್ರಸ್ತುತ ಅವರು ಟಿಆರ್ಎಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಕಡೆಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಇದೇ ಹಿನ್ನಲೆಯಲ್ಲಿ ಮಾತನಾಡಿದ ಕೆಸಿಆರ್, “ಕರ್ನಾಟಕದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಗಡಿ ಪ್ರದೇಶವಾದ ತಾಂಡೂರಿಗೆ ನೀವು ಹತ್ತಿರದಲ್ಲಿದ್ದೀರಿ. ರಾಯಚೂರಿನ ಕೆಲವು ಗಡಿ ಭಾಗದ ಜನರು ತಮ್ಮನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕು ಅಥವಾ ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ರೀತಿಯ ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ ”ಎಂದು ರಾವ್ ಹೇಳಿದರು. ಅಂತೆಯೇ ಇದೇ ಸಂದರ್ಭದಲ್ಲಿ ಅವರು ತಮ್ಮ ಉಚಿತ ಕುಡಿಯುವ ನೀರು ಮಿಷನ್ ಭಗೀರಥ, ಗರ್ಭಿಣಿಯರಿಗೆ ಕೆಸಿಆರ್ ಕಿಟ್‌ಗಳಂತಹ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಹಾಲುಣಿಸುವ ತಾಯಂದಿರು, ಉಚಿತ ವಿದ್ಯುತ್, ಎಕರೆಗೆ ವಾರ್ಷಿಕ 10,000 ರೂ. ನೀಡುವ ಯೋಜನೆಗಳನ್ನು ಕೊಂಡಾಡಿದರು.

ಕೆಸಿಆರ್ ಅವರು ಈ ಹಿಂದೆಯೂ ಇಂತಹ ಅನೇಕ ಹೇಳಿಕೆಗಳನ್ನು ನೀಡಿದ್ದರು, ನಾಂದೇಡ್‌ನಂತಹ ಮಹಾರಾಷ್ಟ್ರದ ಕೆಲವು ಗಡಿ ಪ್ರದೇಶಗಳನ್ನು ಉಲ್ಲೇಖಿಸಿ, ಮತದಾರರು ಬುದ್ಧಿವಂತಿಕೆಯಿಂದ ಯೋಚಿಸುವಂತೆ ಕರೆ ನೀಡಿದರು, ರಾವ್ ತೆಲಂಗಾಣ ಭಾವನೆಯನ್ನು ಮತ್ತೊಮ್ಮೆ ಪ್ರಚೋದಿಸಿದರು, ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಅಖಂಡ ಆಂಧ್ರ ಪ್ರದೇಶ ಅಡಿಯಲ್ಲಿ ಹಿನ್ನಡೆ ಅನುಭವಿಸಿದ ಪ್ರದೇಶವು ಅಭಿವೃದ್ಧಿ ಹೊಂದಲು ಪ್ರಾರಂಭಿಸಿದೆ. ಬೇರೆ ಯಾವುದೇ ರಾಜ್ಯಗಳು ನಮ್ಮ ಯೋಜನೆಗಳನ್ನು ಹೊಂದಿಲ್ಲ. ಹಿಂದಿನ ರೈತರು ನಗರಗಳಲ್ಲಿ ಆಟೋ-ರಿಕ್ಷಾಗಳನ್ನು ನಡೆಸುತ್ತಿದ್ದರು, ಆದರೆ ಈಗ ಗ್ರಾಮಾಂತರವು ಅಭಿವೃದ್ಧಿ ಹೊಂದುತ್ತಿದೆ. ತೆಲಂಗಾಣದಲ್ಲಿ ಒಂದು ಎಕರೆ ಜಮೀನು ನೆರೆಯ ರಾಜ್ಯಗಳಲ್ಲಿ ಮೂರು ಎಕರೆ ಮೌಲ್ಯದ್ದಾಗಿದೆ,” ಎಂದು ಕೆಸಿಆರ್ ಹೇಳಿದರು. 

ರಾಜ್ಯ ಸ್ಥಾಪನೆಯ ಹೋರಾಟದ ದಿನಗಳು ಮತ್ತು ಅಡೆತಡೆಗಳು ಮತ್ತು ಯುನೈಟೆಡ್ ಆಂಧ್ರ ಪ್ರತಿಪಾದಕರು ಎದುರಿಸಿದ ಸವಾಲುಗಳನ್ನು ನೆನಪಿಸಿಕೊಳ್ಳುತ್ತಾ, ಟಿಆರ್‌ಎಸ್ ಮುಖ್ಯಸ್ಥರು 2009 ರಲ್ಲಿ ತಮ್ಮ “ಆಮರಣಾಂತ ಉಪವಾಸ” ವನ್ನು ನೆನಪಿಸಿದರು.

ಮೋದಿ ತೆಲಂಗಾಣಕ್ಕೆ ಶತ್ರು
ತೆಲಂಗಾಣ ರಾಜ್ಯಕ್ಕೆ ಹೆಚ್ಚಿನ ಕೃಷ್ಣಾ ನೀರು ಹಂಚಿಕೆಗೆ ಬೇಡಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಶತ್ರುವಾಗಿದ್ದಾರೆ ಎಂದು ಕೆಸಿಆರ್ ಬಣ್ಣಿಸಿದರು. ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮಾಡಿದ ಒಂದೇ ಒಂದು ಒಳ್ಳೆಯ ಕೆಲಸವನ್ನು ನನಗೆ ತೋರಿಸಿ. ಮತ್ತು ಅವರು ನಮ್ಮ ಕಲ್ಯಾಣ ಯೋಜನೆಗಳನ್ನು ಉಚಿತ ಎಂದು ಕರೆಯುತ್ತಾರೆ ಎಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಸರಕಾರ ಬಂದರೆ ಸಾಕಾಗುವುದಿಲ್ಲ. ದೇಶದಲ್ಲಿನ ನಿರುದ್ಯೋಗ, ನಮ್ಮ ರೂಪಾಯಿ ಮೌಲ್ಯವನ್ನು ನೋಡಿ. ಬಿಜೆಪಿ ಸರ್ಕಾರ ದೊಡ್ಡ ಉದ್ಯಮಿಗಳ ಲಾಭಕ್ಕಾಗಿ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಅವರನ್ನು ಮನೆಗೆ ಕಳುಹಿಸಿ ಉತ್ತಮ ಸರ್ಕಾರವನ್ನು ತರಬೇಕು” ಎಂದು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT