ರಾಹುಲ್ ಗಾಂಧಿ 
ದೇಶ

ಇಂತಹ ರಾಜಕೀಯ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ: ಅತ್ಯಾಚಾರ ಆರೋಪಿಗಳಿಗೆ ಬಿಜೆಪಿ ಬೆಂಬಲಕ್ಕೆ ರಾಹುಲ್ ವಾಗ್ದಾಳಿ

ಕ್ರಿಮಿನಲ್‌ಗಳಿಗೆ ಬಿಜೆಪಿ ಬೆಂಬಲ ಸೂಚಿಸುತ್ತಿರುವುದು ಮಹಿಳೆಯರ ಬಗ್ಗೆ ಇರುವ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ ಮತ್ತು 'ಇಂತಹ ರಾಜಕೀಯ'ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ: ಕ್ರಿಮಿನಲ್‌ಗಳಿಗೆ ಬಿಜೆಪಿ ಬೆಂಬಲ ಸೂಚಿಸುತ್ತಿರುವುದು ಮಹಿಳೆಯರ ಬಗ್ಗೆ ಇರುವ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ ಮತ್ತು 'ಇಂತಹ ರಾಜಕೀಯ'ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವೋ ಮತ್ತು ಹತ್ರಾಸ್, ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ಈಗ ಗುಜರಾತ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಉದಾಹರಣೆಗಳನ್ನು ಅವರು ಉಲ್ಲೇಖಿಸಿದರು, ಅಲ್ಲಿ ಸರ್ಕಾರವು ಈ ವಾರ 2002 ರ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅತ್ಯಾಚಾರ ಮತ್ತು ಹತ್ಯೆಯ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಉತ್ತರ ಪ್ರದೇಶದ ಉನ್ನಾವೋ ಮತ್ತು ಹಾಥರಸ್, ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ಈಗ 2002ರ ಬಿಲ್ಕಿಸ್ ಬಾನು ಪ್ರಕರಣದ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

'ಉನ್ನಾವೋದಲ್ಲಿ ಬಿಜೆಪಿ ಶಾಸಕರನ್ನು ರಕ್ಷಿಸಲು ಕೆಲಸ ಮಾಡಿದೆ. ಕಥುವಾದಲ್ಲಿ ಅತ್ಯಾಚಾರಿಗಳ ಪರವಾಗಿ ರ‍್ಯಾಲಿ ಮಾಡಲಾಯಿತು. ಹಾಥರಸ್‌ನಲ್ಲಿ ಅತ್ಯಾಚಾರಿಗಳ ಪರವಾಗಿ ಸರ್ಕಾರವೇ ಇತ್ತು. ಗುಜರಾತ್‌ನಲ್ಲಿ ಅತ್ಯಾಚಾರಿಗಳ ಬಿಡುಗಡೆ ಮತ್ತು ಅವರಿಗೆ ಗೌರವ ಸಲ್ಲಿಸಲಾಗಿದೆ. ಈ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಬೆಂಬಲ ನೀಡುತ್ತಿರುವುದು ಮಹಿಳೆಯರ ಬಗ್ಗೆ ಬಿಜೆಪಿಯ ಕ್ಷುಲ್ಲಕ ಮನಸ್ಥಿತಿಯನ್ನು ತೋರಿಸುತ್ತದೆ' ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ಪ್ರಧಾನಿ ಮೋದಿ ಜೀ ಅವರಿಗೆ ಇಂತಹ ರಾಜಕಾರಣಕ್ಕೆ ನಾಚಿಕೆಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ, 'ಬಿಜೆಪಿಯ ಇಬ್ಬರು ಶಾಸಕರು ಅಪರಾಧಿಗಳಿಗೆ ವಿನಾಯಿತಿ ನೀಡಿದ ಪರಿಶೀಲನಾ ಸಮಿತಿಯ ಭಾಗವಾಗಿದ್ದಾರೆ' ಎಂದು ಹೇಳಿದರು.

'ಗುಜರಾತ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ವ್ಯಕ್ತಿಗಳಿಗೆ ಕ್ಷಮಾದಾನ ನೀಡಿರುವುದಕ್ಕೆ ಒಂದು ಕುತೂಹಲಕಾರಿ ಸೈಡ್‌ ಸ್ಟೋರಿ ಇದೆ. ಪರಿಶೀಲನಾ ಸಮಿತಿಯಲ್ಲಿ ಇಬ್ಬರು ಬಿಜೆಪಿ ಶಾಸಕರಾದ ಸಿ.ಕೆ. ರಾವ್‌ಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರು! ಮತ್ತೊಬ್ಬರು ಗೋದ್ರಾ ರೈಲು ದಹನ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಮುರಳಿ ಮುಲ್ಚಂದಾನಿ' ಎಂದು ಆರೋಪಿಸಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡುವ ಮೂಲಕ ಸ್ವಾತಂತ್ರ್ಯದ ದಿನವೇ ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ಮತ್ತು ಅವರ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್‌ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು. ಅವರು 15 ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ.

ಬಿಲ್ಕಿಸ್‌ ಬಾನು ಮೇಲೆ 2002ರ ಗೋಧ್ರಾ ಹತ್ಯಾಕಾಂಡದ ನಂತರದಲ್ಲಿ 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು.

ಈ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 2008ರ ಜನವರಿ 21ರಂದು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ 11 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಗೋಧ್ರಾ ರೈಲು ದಹನದ ನಂತರ ಭುಗಿಲೆದ್ದ ಹಿಂಸಾಚಾರದಿಂದ ತಪ್ಪಿಸಿಕೊಳ್ಳುವಾಗ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಬಿಲ್ಕಿಸ್ ಬಾನೊ ಅವರಿಗೆ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದರು. ಮೃತಪಟ್ಟವರಲ್ಲಿ ಮೂರು ವರ್ಷದ ಮಗಳೂ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...