ಸಾಂದರ್ಭಿಕ ಚಿತ್ರ 
ದೇಶ

ಮುಖ್ತಾರ್ ಅನ್ಸಾರಿ, ಸಹೋದರ ಬಿಎಸ್‌ಪಿ ಸಂಸದ ಅಫ್ಜಲ್‌ ಅನ್ಸಾರಿ ನಿವಾಸಗಳ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಹಾಗೂ ಅವರ ಸಹೋದರ, ಮಾಫಿಯಾ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಸೇರಿದ ದೆಹಲಿ ಮತ್ತು ಉತ್ತರ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಹಾಗೂ ಅವರ ಸಹೋದರ, ಮಾಫಿಯಾ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಸೇರಿದ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿರುವ ನಿವಾಸ, ಕಚೇರಿಗಳ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸಿಆರ್‌ಪಿಎಫ್ ಭದ್ರತಾ ಬೆಂಗಾವಲು ಪಡೆಯೊಂದಿಗೆ ಇಡಿ ಅಧಿಕಾರಿಗಳು ಕೇಂದ್ರ ದೆಹಲಿಯ ಜನಪಥ್‌ನಲ್ಲಿರುವ ಗಾಜಿಪುರ ಶಾಸಕರ ಸರ್ಕಾರಿ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಮುಖ್ತಾರ್ ಅನ್ಸಾರಿ ಮತ್ತು ಅವರ ಆಪಾದಿತ ಸಹಚರರಿಗೆ ಸಂಬಂಧಿಸಿದ ದೆಹಲಿ, ಉತ್ತರ ಪ್ರದೇಶದ ಗಾಜಿಪುರ, ಮೊಹಮ್ಮದಾಬಾದ್(ಗಾಜಿಪುರ ಜಿಲ್ಲೆ), ಮೌ ಮತ್ತು ರಾಜ್ಯ ರಾಜಧಾನಿ ಲಖನೌ ಸೇರಿದಂತೆ ಒಟ್ಟು 11 ಕಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ತಾರ್ ಅನ್ಸಾರಿ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐದು ಬಾರಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿ ಪ್ರಸ್ತುತ ಉತ್ತರ ಪ್ರದೇಶದ ಬಂದಾ ಜೈಲಿನಲ್ಲಿದ್ದಾರೆ.

ಭೂಕಬಳಿಕೆ, ಕೊಲೆ ಮತ್ತು ಸುಲಿಗೆ ಆರೋಪಗಳು ಸೇರಿದಂತೆ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ವಿರುದ್ಧ ಕನಿಷ್ಠ 49 ಕ್ರಿಮಿನಲ್ ಮೊಕದ್ದಮೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT