ಸುಬ್ರಮಣಿಯನ್ ಸ್ವಾಮಿ 
ದೇಶ

'ಸಾಂಸ್ಥಿಕ ಚುನಾವಣೆ ಕೊರತೆ': ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ "ಕೊರತೆ" ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ...

ನವದೆಹಲಿ: ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ "ಕೊರತೆ" ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಯೊಂದು ಹುದ್ದೆಗೂ ಪ್ರಧಾನಿ ನರೇಂದ್ರ ಮೋದಿಯವರ ಅನುಮೋದನೆ ಪಡೆದು ನಾಯಕರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಆರೋಪಿಸಿದ್ದಾರೆ.

"ಜನತಾ ಪಕ್ಷ ಮತ್ತು ನಂತರ ಬಿಜೆಪಿಯ ಆರಂಭಿಕ ದಿನಗಳಲ್ಲಿ, ಪದಾಧಿಕಾರಿಗಳನ್ನು ನೇಮಕ ಮಾಡಲು ನಾವು ಪಕ್ಷ ಮತ್ತು ಸಂಸದೀಯ ಪಕ್ಷದ ಚುನಾವಣೆಗಳನ್ನು ನಡೆಸುತ್ತಿದ್ದೇವೆ. ಪಕ್ಷದ ಸಂವಿಧಾನಕ್ಕೆ ಇದರ ಅಗತ್ಯವಿದೆ. ಇಂದು ಬಿಜೆಪಿಯಲ್ಲಿ ಯಾವುದೇ ಚುನಾವಣೆಗಳಿಲ್ಲ. ಪ್ರತಿ ಹುದ್ದೆಗೆ ಮೋದಿ ಅನುಮೋದನೆಯೊಂದಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುತ್ತಿದೆ” ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಆದಾಗ್ಯೂ, ಯಾವಾಗಲೂ ಪಕ್ಷದ ಅಧ್ಯಕ್ಷರು, ಪಕ್ಷದ ಸದಸ್ಯರನ್ನು ವಿವಿಧ ಸ್ಥಾನಗಳಿಗೆ ನಾಮನಿರ್ದೇಶನ ಮಾಡುತ್ತಾರೆ. ನಂತರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಅಥವಾ ಇತರ ಸೂಕ್ತ ಸಂಸ್ಥೆಗಳು ಆ ನೇಮಕಾತಿಗಳನ್ನು ಅನುಮೋದಿಸುತ್ತವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಲವಾರು ವಿಷಯಗಳಲ್ಲಿ ಮೋದಿ ಸರ್ಕಾರದ ವಿರುದ್ಧ ಸದಾ ಟೀಕೆ ಮಾಡುವ ಸುಬ್ರಮಣಿಯನ್ ಸ್ವಾಮಿ ಅವರು ಗುರುವಾರ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT