ಪ್ರಧಾನಿ ಮೋದಿ 
ದೇಶ

ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ಮೂಲಕ ಶುದ್ದ ಕುಡಿಯುವ ನೀರು ಪೂರೈಕೆ- ಪ್ರಧಾನಿ ಮೋದಿ

ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ಮೂಲಕ ಶುದ್ದ ಕುಡಿಯುವ ನೀರು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಣಜಿ: ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ಮೂಲಕ ಶುದ್ದ ಕುಡಿಯುವ ನೀರು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೋವಾದಲ್ಲಿ ನಡೆದ 'ಹರ್ ಘರ್ ಜಲ ಉತ್ಸವ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಂದು ಕುಟುಂಬಕ್ಕೂ ನೀರು ಪೂರೈಸುವ ಸರ್ಕಾರದ ಅಭಿಯಾನ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಎಲ್ಲರ ಪ್ರಯತ್ನಕ್ಕೆ ಇದು ಅತ್ಯುತ್ತಮ ಉದಾಹರಣೆಯಾಗಿದೆ. ದಾದ್ರಾ ನಗರ್ ಹವೇಲಿ ಮತ್ತು ಡಾಮನ್, ಡಿಯೂ ಕೂಡಾ ಹರ್ ಘರ್ ಜಲ ಪ್ರಮಾಣೀಕೃತ ಕೇಂದ್ರಾಡಳಿತ ಪ್ರದೇಶಗಳಾಗಿವೆ ಎಂದರು.

ಈ ಸಾಧನೆಗೆ ಕಾರಣಿಭೂತರಾದ ಪ್ರತಿಯೊಬ್ಬರನ್ನು ವಿಶೇಷವಾಗಿ ಮಹಿಳೆಯರು ಮತ್ತು ಸಹೋದರಿಯರನ್ನು ಅಭಿನಂದಿಸುವುದಾಗಿ ಪ್ರಧಾನಿ ಹೇಳಿದರು. ಗೋವಾ  ಹರ್ ಘರ್ ಜಲ ಪ್ರಮಾಣೀಕೃತ ಮೊದಲ ರಾಜ್ಯವಾಗಿದೆ. ಈ ಸಂಬಂಧ ದೇಶ ಮಹತ್ವದ ಮೈಲುಗಲ್ಲು ಸಾಧಿಸಿದೆ. ಇದೀಗ ಬೇರೆ ಬೇರೆ ರಾಜ್ಯಗಳ 1 ಲಕ್ಷಕ್ಕೂ ಹೆಚ್ಚು ಹಳ್ಳಿಗಳು ಬಯಲು ಮುಕ್ತ ಪ್ರದೇಶಗಳಾಗಿವೆ. ಮೂರನೇ ಸಾಧನೆ ಸ್ವಚ್ಛ ಭಾರತ ಅಭಿಯಾನಕ್ಕೆ ಸಂಬಂಧಿಸಿದ್ದಾಗಿದೆ. ಎಲ್ಲಾ ದೇಶ ವಾಸಿಗಳ ಪ್ರಯತ್ನದ ಫಲವಾಗಿದೆ ದೇಶ ಬಯಲು ಮುಕ್ತ ಪ್ರದೇಶವಾಗಿದೆ ಎಂದರು.

ದೇಶ ನಿರ್ಮಾಣದ ಹಾದಿಯನ್ನು ನಾವೆಲ್ಲ ಆಯ್ಕೆ ಮಾಡಬೇಕಾಗಿದೆ. ಇದರಿಂದಾಗಿ ದೇಶದಲ್ಲಿನ ಪ್ರಸ್ತುತ ಹಾಗೂ ಭವಿಷ್ಯದ ಸವಾಲುಗಳನ್ನು  ಪರಿಹರಿಸಬಹುದಾಗಿದೆ. ದೇಶದ ಬಗ್ಗೆ ಕಾಳಜಿ ಇಲ್ಲದವರು ದೇಶದ ಪ್ರಸ್ತುತ ಮತ್ತು ಭವಿಷ್ಯದ ಬಗ್ಗೆ ಮಾತನಾಡಬಾರದು. ಅಂತವರು ನೀರಿಗಾಗಿ ದೊಡ್ಡ ಭರವಸೆ ನೀಡುತ್ತಾರೆ ಆದರೆ, ಆ ಕೆಲಸವನ್ನು ದೂಡ್ಡ ಮಟ್ಟದಲ್ಲಿ ಮಾಡುವುದಿಲ್ಲ, ಇದೀಗ ದೇಶದಲ್ಲಿನ ಜೌಗು ಪ್ರದೇಶಗಳ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಪೈಕಿ 50 ಪ್ರದೇಶಗಳು ಕಳೆದ 8 ವರ್ಷಗಳಿಂದಾಚೆಗೆ ಸೇರಿವೆ. ನೀರಿನ ಸುರಕ್ಷತೆಗಾಗಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಮೋದಿ ತಿಳಿಸಿದರು. 

ಕೇವಲ ಮೂರು ವರ್ಷಗಳಲ್ಲಿ ಜಲ ಜೀವನ್ ಮಿಷನ್ ಅಭಿಯಾನದಡಿ 7 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಇದು ಸಾಮಾನ್ಯ ಸಾಧನೆಯಲ್ಲ, ಸ್ವತಂತ್ರಗೊಂಡ 7 ದಶಕಗಳಲ್ಲಿ ದೇಶದಲ್ಲಿ ಕೇವಲ 3 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಹೊಂದಿದ್ದವು ಎಂದು ಪ್ರಧಾನ ಮಂತ್ರಿ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT