ಪನ್ನೀರ ಸೆಲ್ವಂ - ಪಳನಿಸ್ವಾಮಿ 
ದೇಶ

ಓಪಿಎಸ್ ಕರೆ ತಿರಸ್ಕರಿಸಿದ ಇಪಿಎಸ್, ಮತ್ತೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ

ಮದ್ರಾಸ್ ಹೈಕೋರ್ಟ್ ಆದೇಶದಿಂದ ಐಐಎಡಿಎಂಕೆ ಪಕ್ಷದಲ್ಲಿ ಮತ್ತೊಂದು ತಿರುವು ಪಡೆದಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಓ. ಪನ್ನೀರಸೆಲ್ವಂ ಅಥವಾ ಒಪಿಎಸ್ ಅವರ ಕರೆಯನ್ನು ಎಐಎಡಿಎಂಕೆ ನಾಯಕ ಮತ್ತು ತಮಿಳುನಾಡು ಮಾಜಿ...

ಚೆನ್ನೈ: ಮದ್ರಾಸ್ ಹೈಕೋರ್ಟ್ ಆದೇಶದಿಂದ ಐಐಎಡಿಎಂಕೆ ಪಕ್ಷದಲ್ಲಿ ಮತ್ತೊಂದು ತಿರುವು ಪಡೆದಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಓ. ಪನ್ನೀರಸೆಲ್ವಂ ಅಥವಾ ಒಪಿಎಸ್ ಅವರ ಕರೆಯನ್ನು ಎಐಎಡಿಎಂಕೆ ನಾಯಕ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಶುಕ್ರವಾರ ತಿರಸ್ಕರಿಸಿದ್ದಾರೆ.

ಜುಲೈ 11 ರಂದು ಪಕ್ಷದಿಂದ ಅವರನ್ನು ಹೊರಹಾಕಿದ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಯು ಕಾನೂನುಬಾಹಿರ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದ ಒಂದು ದಿನದ ನಂತರ ಪನ್ನೀರಸೆಲ್ವಂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದರು.

ಪಳನಿಸ್ವಾಮಿ ಅಥವಾ ಇಪಿಎಸ್ ಅವರನ್ನು ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಮಾಡಿದ್ದು ಕಾನೂನುಬಾಹಿರ ಎಂದು ನ್ಯಾಯಾಲಯ ಹೇಳಿದೆ ಮತ್ತು ಜೂನ್ 23, 2022 ರ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಆದೇಶಿಸಿತ್ತು.  ಆ ಮೂಲಕ ನ್ಯಾಯಾಲಯದ ಆದೇಶ ಪಕ್ಷದಲ್ಲಿ ದ್ವಿ-ನಾಯಕತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಿದೆ. ಆದರೆ ಹೈಕೋರ್ಟ್ ಏಕ ಸದಸ್ಯ ಪೀಠದ ಈ ಆದೇಶವನ್ನು ಪ್ರಶ್ನಿಸಿ ಪಳನಿಸ್ವಾಮಿ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಉಭಯ ನಾಯಕರು ಜಂಟಿಯಾಗಿ ಜನರಲ್ ಕೌನ್ಸಿಲ್ ಸಭೆಗೆ ಕರೆ ನೀಡಬೇಕೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿತ್ತು. ಒಂದು ವೇಳೆ ಕೌನ್ಸಿಲ್ ಸದಸ್ಯರಲ್ಲಿ ಐದನೇ ಒಂದು ಭಾಗದ ಸದಸ್ಯರು ಸಭೆಗೆ ಒತ್ತಾಯಿಸಿದರೂ ಸಭೆ ಕರೆಯಬೇಕೆಂದು ಕೋರ್ಟ್ ಹೇಳಿದೆ.

ಒಪಿಎಸ್ ಮನವಿಗೆ ಪ್ರತಿಕ್ರಿಯಿಸಿದ ಇಪಿಎಸ್, “ಪಕ್ಷದ ಕೇಂದ್ರ ಕಚೇರಿಗೆ ರೌಡಿಗಳನ್ನು ಕರೆತಂದ ಮತ್ತು ಎಐಎಡಿಎಂಕೆ ಕಾರ್ಯಕರ್ತರಿಂದ ದೇವಸ್ಥಾನವೆಂದು ಪರಿಗಣಿಸಲ್ಪಟ್ಟ ಸ್ಥಳದಲ್ಲಿ ಬೆಂಕಿ ಹಚ್ಚಿದವರೊಂದಿಗೆ ನಾನು ಹೇಗೆ ಕೆಲಸ ಮಾಡಲಿ?” ಎಂದು ಓಪಿಎಸ್ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT