ನಿತೀಶ್ ಕುಮಾರ್ 
ದೇಶ

ಲೋಕಸಭಾ ಚುನಾವಣೆ: ಇತರ ಪಕ್ಷಗಳು ಬಯಸಿದರೆ ನಿತೀಶ್‌ ಪ್ರಧಾನಿ ಅಭ್ಯರ್ಥಿ: ಜೆಡಿಯು

2024ರ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಹರಡಿರುವಂತೆಯೇ, ಒಂದು ವೇಳೆ ಇತರ ಪಕ್ಷಗಳು ಬಯಸಿದರೆ ಇದು ಪರ್ಯಾಯ ಆಯ್ಕೆಯಾಗಬಹುದು ಎಂದು ಜೆಡಿಯು ಶುಕ್ರವಾರ ಹೇಳಿದೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಹರಡಿರುವಂತೆಯೇ, ಒಂದು ವೇಳೆ ಇತರ ಪಕ್ಷಗಳು ಬಯಸಿದರೆ ಇದು ಪರ್ಯಾಯ ಆಯ್ಕೆಯಾಗಬಹುದು ಎಂದು ಜೆಡಿಯು ಶುಕ್ರವಾರ ಹೇಳಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಿತೀಶ್ ಕುಮಾರ್  ಗಮನ ಹರಿಸಿದ್ದಾರೆ. ಮುಂದಿನ ವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿಶ್ವಾಸ ಮತ ಯಾಚನೆ ಬಳಿಕ ವಿವಿಧ ಪಕ್ಷಗಳ ಮುಖಂಡರ ಭೇಟಿಯಾಗಿ ನಿತೀಶ್ ಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ.

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ಹೆಚ್ಚಿನ ವರ್ಷ ಆಡಳಿತ ನಡೆಸಿದ್ದಾರೆ. ಆದರೆ, ಅವರು ಪ್ರತಿಪಕ್ಷಗಳ ಪ್ರಧಾನ ಮಂತ್ರಿ ಅಭ್ಯರ್ಥಿ ಅಲ್ಲ. ಇತರ ಪಕ್ಷಗಳು ಬಯಸಿದರೆ ನಂತರ ಪ್ರಧಾನಿ ಅಭ್ಯರ್ಥಿಯಾಗಬಹುದು ಎಂದು ಅವರ ಆಪ್ತರಾಗಿರುವ ಸಿಂಗ್ ಪಿಟಿಐ ಗೆ ತಿಳಿಸಿದರು.

ಬಿಹಾರದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡ ನಂತರ ಶರದ್ ಪವಾರ್, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಮಂದಿ ನಿತೀಶ್ ಕುಮಾರ್ ಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಎಲ್ಲ ಪ್ರತಿಪಕ್ಷಗಳು ಒಟ್ಟಾಗಿ ಕುಳಿತು ನಾಯಕತ್ವದ ಬಗ್ಗೆ ನಿರ್ಧರಿಸಬೇಕಾಗಿದೆ ಎಂದರು.

ಬಿಜೆಪಿಯನ್ನು ಸೋಲಿಸಲು ಎಲ್ಲಾ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕಿದೆ. ನಂತರ ತಮ್ಮ ನಾಯಕ ಯಾರು ಎಂಬುದನ್ನು ನಿರ್ಧರಿಸಬೇಕಾಗಿದೆ. ಎರಡು ಆಯ್ಕೆಗಳಿವೆ. ಬಿಜೆಪಿ ವಿರುದ್ಧ ಹೋರಾಡಲು ಎಲ್ಲಾ ಪ್ರತಿಪಕ್ಷಗಳನ್ನು ಒಂದುಗೂಡಿಸುವ ಕಾರ್ಯವನ್ನು ನಿತೀಶ್ ಕುಮಾರ್ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT