ರಾಕೇಶ್ ಟಿಕಾಯತ್ 
ದೇಶ

ಲಖಿಂಪುರ ಖೇರಿ: ಅಧಿಕಾರಿಗಳ ಭೇಟಿ ಬಳಿಕ ರೈತರ ಪ್ರತಿಭಟನೆ ಅಂತ್ಯ, ದೆಹಲಿಯಲ್ಲಿ ಎಸ್‌ಕೆಎಂ ಸಭೆ

ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸುವುದು ಮತ್ತು ಎಂಎಸ್‌ಪಿ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ರೈತರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಅಂತ್ಯವಾಗಿದೆ.

ಲಖೀಂಪುರ ಖೇರಿ: ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸುವುದು ಮತ್ತು ಎಂಎಸ್‌ಪಿ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ರೈತರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಅಂತ್ಯವಾಗಿದೆ.

ಜಿಲ್ಲೆಯ ಉನ್ನತ ಅಧಿಕಾರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ರಾಕೇಶ್ ಟಿಕಾಯತ್ ಅವರು ತಿಳಿಸಿದ್ದಾರೆ.

ರೈತರನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್, ಸೆಪ್ಟೆಂಬರ್ 6 ರಂದು ದೆಹಲಿಯಲ್ಲಿ ನಡೆಯುವ ಎಸ್ ಕೆಎಂ ಸಭೆಯಲ್ಲಿ ಮುಂದಿನ ಕಾರ್ಯತಂತ್ರವನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ.

ಇಂದು ಮಧ್ಯಾಹ್ನ 2.30ರ ಸುಮಾರಿಗೆ ಜಿಲ್ಲಾಧಿಕಾರಿ ಮಹೇಂದ್ರ ಬಹದ್ದೂರ್ ಸಿಂಗ್ ಹಾಗೂ ಇತರರು ಧರಣಿ ಸ್ಥಳಕ್ಕೆ ಆಗಮಿಸಿ ರೈತರಿಂದ ಮನವಿ ಪತ್ರ ಸ್ವೀಕರಿಸಿದರು.

75 ಗಂಟೆಗಳ ಕಾಲ ನಡೆದ ಧರಣಿಯನ್ನು ಟಿಕಾಯತ್ ಮತ್ತು ಇತರ ರೈತ ಮುಖಂಡರು ಅಂತ್ಯಗೊಳಿಸುವ ಮುನ್ನ ಸೆಪ್ಟೆಂಬರ್ ಮೊದಲ ವಾರದಲ್ಲಿ ರೈತರಿಗಾಗಿ ಸರ್ಕಾರದ ಮಟ್ಟದಲ್ಲಿ ಸಭೆ ಏರ್ಪಡಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿಯಲ್ಲಿ ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಅಜಯ್ ಮಿಶ್ರಾ ಅವರ ಮಗ ಆಶೀಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT