ತೆಲುಗು ಕವಿ ವರವರ ರಾವ್ 
ದೇಶ

ಮುಂಬೈನಲ್ಲೇ ವಾಸಿಸಬೇಕು, ಮನೆಯಲ್ಲಿ ಸಂದರ್ಶಕರಿಗೆ ಅವಕಾಶ ಇಲ್ಲ: ವರವರ ರಾವ್‌ಗೆ ವಿಶೇಷ ಕೋರ್ಟ್

ಇತ್ತೀಚೆಗಷ್ಟೇ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು...

ಮುಂಬೈ: ಇತ್ತೀಚೆಗಷ್ಟೇ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು ಮುಂಬೈನಲ್ಲಿ ನೆಲೆಸುವಂತೆ ಮತ್ತು ತನ್ನ ಅನುಮತಿ ಇಲ್ಲದೆ ನಗರವನ್ನು ಬಿಟ್ಟು ಹೋಗದಂತೆ ಸೂಚಿಸಿದೆ. 

ಮುಂಬೈನಲ್ಲಿರುವ ಅವರ ನಿವಾಸದಲ್ಲಿ "ಸಂದರ್ಶಕರ ಸಭೆ" ಮಾಡುವುದನ್ನು ಸಹ ಕೋರ್ಟ್ ನಿರ್ಬಂಧಿಸಿದೆ ಮತ್ತು ಯಾವುದೇ "ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಡಿ, ತಮ್ಮ ವಿರುದ್ಧದ ಪ್ರಕರಣ ಅಥವಾ ಇತರ ರೀತಿಯ"  ಪ್ರಕರಣದ ಯಾವುದೇ ಸಹ-ಆರೋಪಿಗಳನ್ನು ಸಂಪರ್ಕಿಸದಂತೆ ಕೋರ್ಟ್ ಸೂಚಿಸಿದೆ.

ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ವರವರ ರಾವ್ ಅವರಿಗೆ ಜಾಮೀನು ನೀಡಿತ್ತು.

ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ವೇಳೆ ವಿಶೇಷ ನ್ಯಾಯಾಲಯವು ರಾವ್ ಅವರ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದ್ದು, ಅದರ ವಿವರಗಳು ಶನಿವಾರ ಲಭ್ಯವಾಗಿವೆ.

ಜಾಮೀನು ಷರತ್ತುಗಳ ಪ್ರಕಾರ ರಾವ್ ಅವರು ಬೃಹತ್ ಮುಂಬೈ ಪ್ರದೇಶದಲ್ಲಿ ವಾಸಿಸಬೇಕು ಮತ್ತು ಎನ್ಐಎ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ನಗರವನ್ನು ತೊರೆಯಬಾರದು.

ಮುಂಬೈನಲ್ಲಿ ಅವರು ಇರುವ ನಿವಾಸದ ವಿವರವಾದ ವಿಳಾಸ ಮತ್ತು ಅವರ ಸಂಪರ್ಕ ಸಂಖ್ಯೆಯನ್ನು ಅವರ ಮೂವರು ನಿಕಟ ಸಂಬಂಧಿಗಳು ಮತ್ತು ಅವರೊಂದಿಗೆ ವಾಸಿಸುವ ವ್ಯಕ್ತಿಗಳ ಮೊಬೈಲ್ ನಂಬರ್ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT