ತೆಲುಗು ಕವಿ ವರವರ ರಾವ್ 
ದೇಶ

ಮುಂಬೈನಲ್ಲೇ ವಾಸಿಸಬೇಕು, ಮನೆಯಲ್ಲಿ ಸಂದರ್ಶಕರಿಗೆ ಅವಕಾಶ ಇಲ್ಲ: ವರವರ ರಾವ್‌ಗೆ ವಿಶೇಷ ಕೋರ್ಟ್

ಇತ್ತೀಚೆಗಷ್ಟೇ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು...

ಮುಂಬೈ: ಇತ್ತೀಚೆಗಷ್ಟೇ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು ಮುಂಬೈನಲ್ಲಿ ನೆಲೆಸುವಂತೆ ಮತ್ತು ತನ್ನ ಅನುಮತಿ ಇಲ್ಲದೆ ನಗರವನ್ನು ಬಿಟ್ಟು ಹೋಗದಂತೆ ಸೂಚಿಸಿದೆ. 

ಮುಂಬೈನಲ್ಲಿರುವ ಅವರ ನಿವಾಸದಲ್ಲಿ "ಸಂದರ್ಶಕರ ಸಭೆ" ಮಾಡುವುದನ್ನು ಸಹ ಕೋರ್ಟ್ ನಿರ್ಬಂಧಿಸಿದೆ ಮತ್ತು ಯಾವುದೇ "ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಡಿ, ತಮ್ಮ ವಿರುದ್ಧದ ಪ್ರಕರಣ ಅಥವಾ ಇತರ ರೀತಿಯ"  ಪ್ರಕರಣದ ಯಾವುದೇ ಸಹ-ಆರೋಪಿಗಳನ್ನು ಸಂಪರ್ಕಿಸದಂತೆ ಕೋರ್ಟ್ ಸೂಚಿಸಿದೆ.

ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ವರವರ ರಾವ್ ಅವರಿಗೆ ಜಾಮೀನು ನೀಡಿತ್ತು.

ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ವೇಳೆ ವಿಶೇಷ ನ್ಯಾಯಾಲಯವು ರಾವ್ ಅವರ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದ್ದು, ಅದರ ವಿವರಗಳು ಶನಿವಾರ ಲಭ್ಯವಾಗಿವೆ.

ಜಾಮೀನು ಷರತ್ತುಗಳ ಪ್ರಕಾರ ರಾವ್ ಅವರು ಬೃಹತ್ ಮುಂಬೈ ಪ್ರದೇಶದಲ್ಲಿ ವಾಸಿಸಬೇಕು ಮತ್ತು ಎನ್ಐಎ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ನಗರವನ್ನು ತೊರೆಯಬಾರದು.

ಮುಂಬೈನಲ್ಲಿ ಅವರು ಇರುವ ನಿವಾಸದ ವಿವರವಾದ ವಿಳಾಸ ಮತ್ತು ಅವರ ಸಂಪರ್ಕ ಸಂಖ್ಯೆಯನ್ನು ಅವರ ಮೂವರು ನಿಕಟ ಸಂಬಂಧಿಗಳು ಮತ್ತು ಅವರೊಂದಿಗೆ ವಾಸಿಸುವ ವ್ಯಕ್ತಿಗಳ ಮೊಬೈಲ್ ನಂಬರ್ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT