ಅನುರಾಗ್ ಠಾಕೂರ್, ಮನೀಶ್ ಸಿಸೋಡಿಯಾ 
ದೇಶ

ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು

ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಬಕಾರಿ ನೀತಿಯಡಿ ಭ್ರಷ್ಟಾಚಾರ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಆರೋಪಿಯನ್ನಾಗಿ ಮಾಡಿದ್ದರೂ ಸಹ ಈ ಹಗರಣದ ಪ್ರಮುಖ ಸಂಚುಕೋರ ಸಿಎಂ ಅರವಿಂದ್ ಕೇಜ್ರಿವಾಲ್ ಎಂದು ಆಪಾದಿಸಿದರು. ಇದೇ ವೇಳೆ ಮಾತನಾಡಿದ ಸಂಸದ ಮನೋಜ್ ತಿವಾರಿ ಮತ್ತು ಆದೇಶ್ ಗುಪ್ತಾ, ಮನೀಶ್ ಸಿಸೋಡಿಯಾ ಅವರನ್ನು Money SHH ಎಂದು ಕರೆದರು. 

ಮದ್ಯ ಹಗರಣದಲ್ಲಿ ಸಿಬಿಐ ದಾಳಿ ಬಳಿಕ ಮನೀಶ್ ಸಿಸೋಡಿಯಾ ಅವರ ಮುಖವಾಡ ಕಳಚಿದೆ ಎಂದು ಹೇಳಿದ ಕೇಂದ್ರ ಸಚಿವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಮನೀಶ್ ಸಿಸೋಡಿಯಾ ಅವರಿಗೆ ಸಾಧ್ಯವಾಗಲಿಲ್ಲ. ನಿಮ್ಮ ಮದ್ಯ ನೀತಿ ಸರಿಯಾಗಿದ್ದರೆ ಅದನ್ನು ವಾಪಸ್ ಪಡೆದುಕೊಂಡಿದ್ದೇಕೆ ಎಂದು ಸಿಎಂ ಕೇಜ್ರಿವಾಲ್ ಸರ್ಕಾರವನ್ನು ಪ್ರಶ್ನಿಸಿದರು. ಸಾರಾಯಿ ನೀತಿ ನಿಯಮಗಳಲ್ಲಿ ಭ್ರಷ್ಟಾಚಾರ ಕಂಡುಬಂದಾಗ ಈ ನೀತಿಯನ್ನು ಕೇಜ್ರಿವಾಲ್ ಸರ್ಕಾರ ಹಿಂಪಡೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT