ಅನುರಾಗ್ ಠಾಕೂರ್, ಮನೀಶ್ ಸಿಸೋಡಿಯಾ 
ದೇಶ

ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು

ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ತಮ್ಮ ಮನೆ ಮೇಲಿನ ಸಿಬಿಐ ದಾಳಿಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಬಕಾರಿ ನೀತಿಯಡಿ ಭ್ರಷ್ಟಾಚಾರ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಆರೋಪಿಯನ್ನಾಗಿ ಮಾಡಿದ್ದರೂ ಸಹ ಈ ಹಗರಣದ ಪ್ರಮುಖ ಸಂಚುಕೋರ ಸಿಎಂ ಅರವಿಂದ್ ಕೇಜ್ರಿವಾಲ್ ಎಂದು ಆಪಾದಿಸಿದರು. ಇದೇ ವೇಳೆ ಮಾತನಾಡಿದ ಸಂಸದ ಮನೋಜ್ ತಿವಾರಿ ಮತ್ತು ಆದೇಶ್ ಗುಪ್ತಾ, ಮನೀಶ್ ಸಿಸೋಡಿಯಾ ಅವರನ್ನು Money SHH ಎಂದು ಕರೆದರು. 

ಮದ್ಯ ಹಗರಣದಲ್ಲಿ ಸಿಬಿಐ ದಾಳಿ ಬಳಿಕ ಮನೀಶ್ ಸಿಸೋಡಿಯಾ ಅವರ ಮುಖವಾಡ ಕಳಚಿದೆ ಎಂದು ಹೇಳಿದ ಕೇಂದ್ರ ಸಚಿವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಮನೀಶ್ ಸಿಸೋಡಿಯಾ ಅವರಿಗೆ ಸಾಧ್ಯವಾಗಲಿಲ್ಲ. ನಿಮ್ಮ ಮದ್ಯ ನೀತಿ ಸರಿಯಾಗಿದ್ದರೆ ಅದನ್ನು ವಾಪಸ್ ಪಡೆದುಕೊಂಡಿದ್ದೇಕೆ ಎಂದು ಸಿಎಂ ಕೇಜ್ರಿವಾಲ್ ಸರ್ಕಾರವನ್ನು ಪ್ರಶ್ನಿಸಿದರು. ಸಾರಾಯಿ ನೀತಿ ನಿಯಮಗಳಲ್ಲಿ ಭ್ರಷ್ಟಾಚಾರ ಕಂಡುಬಂದಾಗ ಈ ನೀತಿಯನ್ನು ಕೇಜ್ರಿವಾಲ್ ಸರ್ಕಾರ ಹಿಂಪಡೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!