ಝೊರಾಮ್ತಂಗ 
ದೇಶ

ವೈದ್ಯರಿಗೆ ಥಳಿತ: ಪುತ್ರಿಯ ಅನುಚಿತ ವರ್ತನೆಗೆ ಕ್ಷಮೆಯಾಚಿಸಿದ ಮಿಜೋರಾಂ ಸಿಎಂ!

ವೈದ್ಯರೊಂದಿಗೆ ತಮ್ಮ ಮಗಳು ಮಿಲಾರಿ ಚಂಗ್ಟೆಯ 'ದುವರ್ತನೆ'ಗಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಗುವಾಹಟಿ: ವೈದ್ಯರೊಂದಿಗೆ ತಮ್ಮ ಮಗಳು ಮಿಲಾರಿ ಚಂಗ್ಟೆಯ 'ದುವರ್ತನೆ'ಗಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ವೈದ್ಯರ ಮೇಲೆ ಮಿಲಾರಿ ಹಲ್ಲೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ನಾಡಿನ ಜನತೆಯ ಕ್ಷಣೆಯಾಚಿಸಿರುವ ಸಿಎಂ, ನಾನು ನನ್ನ ಮಗಳ ಕೃತ್ಯವನ್ನು ಸಮರ್ಥಿಸುವುದಿಲ್ಲ ಹೇಳಿದ್ದಾರೆ.

ಐಜ್ವಾಲ್ ನ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಮೇಲೆ ಮಿಲಾರಿ ಚಂಗ್ಟೆ ಹಲ್ಲೆ ನಡೆಸಿದ್ದರು. ಚರ್ಮ ರೋಗ ವೈದ್ಯರೊಬ್ಬರ ಬಳಿ ತೆರಳಲು ಅನುಮತಿ ಪಡೆಯಲು ಮಿಲಾರಿ ಆಸ್ಪತ್ರೆಗೆ ಹೋಗಿದ್ದರು. ಬಾಗಿಲು ತೆರೆದು ಒಳಬಂದ ಮಿಲಾರಿ ವೈದ್ಯರ ಮೇಲೆ ಏಕಾಏಕಿ ದಾಳಿ ನಡೆಸಿದ್ದರು. ಆಸ್ಪತ್ರೆಗೆ ಭೇಟಿ ನೀಡುವ ಮೊದಲು ಅಪಾಯಿಂಟ್‌ಮೆಂಟ್ ಪಡೆಯುವಂತೆ ವೈದ್ಯರು ಹೇಳಿದ್ದರಿಂದ ಸಿಎಂ ಪುತ್ರಿ ಕೋಪಗೊಂಡು ಹಲ್ಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ನಂತರ, ಆಕೆಯ ಹಿರಿಯ ಸಹೋದರ ರಾಮತಾನ್ಸಿಯಾಮಾ ಸಾಮಾಜಿಕ ಮಾಧ್ಯಮದ ಮೂಲಕ ಕ್ಷಮೆಯಾಚಿಸಿದ್ದಾರೆ. ಹಿಂದಿನ ರಾತ್ರಿ ಕೆಳಗೆ ಬಿದ್ದಿದ್ದರಿಂದ ಆಕೆಯ ಹಣೆಯ ಮೇಲೆ ಗಾಯಗಳಾಗಿದ್ದು ಇದರಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಿದರು.

ವೈದ್ಯರ ಮೇಲಿನ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿತ್ತು. ಅಲ್ಲದೆ ಮಿಜೋರಾಂನಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs South Africa: ತವರಿನಲ್ಲಿ ಭಾರತಕ್ಕೆ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಜನಸ್ನೇಹಿ ಅಧಿಕಾರಿ ಪ್ರಾಣ ಕಸಿದ ಶ್ವಾನ: ಮುಗಿಲು ಮುಟ್ಟಿದ ಬೀಳಗಿ ಕುಟುಂಬಸ್ಥರ ಆಕ್ರಂದನ; ಬಡತನದಲ್ಲಿ ಅರಳಿದ್ದ ಧೀಮಂತ ಪ್ರತಿಭೆ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

SCROLL FOR NEXT