ರಾಕೇಶ್ ಟಿಕಾಯತ್ 
ದೇಶ

ನವದೆಹಲಿ: ಪೊಲೀಸ್ ಕಸ್ಟಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್!

ರಾಷ್ಟ್ರೀಯ ರಾಜಧಾನಿಯ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಟಿಕಾಯತ್ ದೆಹಲಿಯ ಮಧು ವಿಹಾರ್ ಪೊಲೀಸ್ ಠಾಣೆಯ ವಶದಲ್ಲಿದ್ದಾರೆ. 

ನವದೆಹಲಿ: ರಾಷ್ಟ್ರೀಯ ರಾಜಧಾನಿಯ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ  ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಟಿಕಾಯತ್ ದೆಹಲಿಯ ಮಧು ವಿಹಾರ್ ಪೊಲೀಸ್ ಠಾಣೆಯ ವಶದಲ್ಲಿದ್ದಾರೆ. 

ಇದಕ್ಕೂ ಮುನ್ನಾ ವಿಡಿಯೋ ಬಿಡುಗಡೆ ಮಾಡಿರುವ ಅವರು, ಪೊಲೀಸರು ತಮ್ಮನ್ನು ತಡೆದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರು ರಾಕೇಶ್ ಟಿಕಾಯತ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಪ್ರಕಾರ, ದೇಶದ ನಿರುದ್ಯೋಗದ ವಿರುದ್ಧ ಜಂತರ್- ಮಂತರ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಟಿಕಾಯತ್  ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಟಿಕಾಯತ್, ಈ ಬಂಧನ ಹೊಸ ಕ್ರಾಂತಿಯನ್ನು ತರಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರೆಯಲಿದೆ. ನಿಲ್ಲುವುದಿಲ್ಲ. ಬಿಡುವುದಿಲ್ಲ. ದಣಿವಾಗುವುದಿಲ್ಲ ಎಂದು ಹೇಳಿದ್ದಾರೆ.

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು, ಜಂತರ್ ಮಂತರ್ ಗೆ ಹೋಗುತ್ತಿದ್ದಾಗ ಘಾಜಿಪುರದಲ್ಲಿ ಟಿಕಾಯತ್ ಅವರನ್ನು ತಡೆಯಲಾಯಿತು. ಇದರ ನಂತರ ಅವರನ್ನು ವಶಕ್ಕೆ ತೆಗೆದುಕೊಂಡು ಮಧು ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಪೊಲೀಸರು ಅವರೊಂದಿಗೆ ಮಾತನಾಡಿ ಹಿಂತಿರುಗುವಂತೆ ವಿನಂತಿಸಿದರು ಎಂದು ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಗೋಪಾಲ್ ರೈ ಅವರು ಟಿಕಾಯತ್ ಬಂಧನವನ್ನು ಖಂಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!