ಜಂತರ್-ಮಂತರ್ ನಲ್ಲಿ ರೈತರ ಪ್ರತಿಭಟನೆ 
ದೇಶ

ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ನೂರಾರು ರೈತರ ಆಗಮನ; ಘಾಜಿಪುರದಲ್ಲಿ ಹಲವರು ವಶಕ್ಕೆ

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ. 

ನವದೆಹಲಿ: ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ.
 
ಕೆಲವು ಪ್ರದೇಶಗಳಲ್ಲಿ ರೈತರನ್ನು ಜಂತರ್ ಮಂತರ್ ಪ್ರವೇಶಿಸದಂತೆ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ ಎಂದು ಎಸ್ ಕೆಎಂ ನಾಯಕರು ಆರೋಪಿಸಿದ್ದಾರೆ. 

ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಮುಂದಾಗಿದ್ದ 19 ರೈತರನ್ನು ಘಾಜಿಪುರ ಗಡಿಯಲ್ಲಿ ತಡೆಯಲಾಗಿದೆ.

ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಅಹಿತಕರ ಘಟನೆಗಳನ್ನು ತಡೆಯಲು ಪ್ರತಿಭಟನಾ ನಿರತರನ್ನು ಬಸ್ ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.

ಎಂಎಸ್ ಪಿಗೆ ಸಂಬಂಧಿಸಿದಂತೆ ಕಾನೂನು ಖಾತ್ರಿ, ವಿದ್ಯುತ್ ತಿದ್ದುಪಡಿ ಮಸೂದೆ-2022 ರದ್ದುಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಒಂದು ಪೂರ್ತಿ ದಿನ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮಹಾಪಂಚಾಯತ್ ನ್ನು ಜಂತರ್ ಮಂತರ್ ನಲ್ಲಿ ಆಯೋಜಿಸಿದ್ದೆವೆ ಎಂದು ಎಸ್ ಕೆಎಂ (ರಾಜಕೀಯೇತರ) ಸದಸ್ಯ ಅಭಿಮನ್ಯು ಸಿಂಗ್ ಕೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT