ಜಂತರ್-ಮಂತರ್ ನಲ್ಲಿ ರೈತರ ಪ್ರತಿಭಟನೆ 
ದೇಶ

ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ನೂರಾರು ರೈತರ ಆಗಮನ; ಘಾಜಿಪುರದಲ್ಲಿ ಹಲವರು ವಶಕ್ಕೆ

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ. 

ನವದೆಹಲಿ: ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ.
 
ಕೆಲವು ಪ್ರದೇಶಗಳಲ್ಲಿ ರೈತರನ್ನು ಜಂತರ್ ಮಂತರ್ ಪ್ರವೇಶಿಸದಂತೆ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ ಎಂದು ಎಸ್ ಕೆಎಂ ನಾಯಕರು ಆರೋಪಿಸಿದ್ದಾರೆ. 

ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಮುಂದಾಗಿದ್ದ 19 ರೈತರನ್ನು ಘಾಜಿಪುರ ಗಡಿಯಲ್ಲಿ ತಡೆಯಲಾಗಿದೆ.

ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಅಹಿತಕರ ಘಟನೆಗಳನ್ನು ತಡೆಯಲು ಪ್ರತಿಭಟನಾ ನಿರತರನ್ನು ಬಸ್ ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.

ಎಂಎಸ್ ಪಿಗೆ ಸಂಬಂಧಿಸಿದಂತೆ ಕಾನೂನು ಖಾತ್ರಿ, ವಿದ್ಯುತ್ ತಿದ್ದುಪಡಿ ಮಸೂದೆ-2022 ರದ್ದುಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಒಂದು ಪೂರ್ತಿ ದಿನ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮಹಾಪಂಚಾಯತ್ ನ್ನು ಜಂತರ್ ಮಂತರ್ ನಲ್ಲಿ ಆಯೋಜಿಸಿದ್ದೆವೆ ಎಂದು ಎಸ್ ಕೆಎಂ (ರಾಜಕೀಯೇತರ) ಸದಸ್ಯ ಅಭಿಮನ್ಯು ಸಿಂಗ್ ಕೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!