ಜಂತರ್-ಮಂತರ್ ನಲ್ಲಿ ರೈತರ ಪ್ರತಿಭಟನೆ 
ದೇಶ

ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ನೂರಾರು ರೈತರ ಆಗಮನ; ಘಾಜಿಪುರದಲ್ಲಿ ಹಲವರು ವಶಕ್ಕೆ

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ. 

ನವದೆಹಲಿ: ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ.
 
ಕೆಲವು ಪ್ರದೇಶಗಳಲ್ಲಿ ರೈತರನ್ನು ಜಂತರ್ ಮಂತರ್ ಪ್ರವೇಶಿಸದಂತೆ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ ಎಂದು ಎಸ್ ಕೆಎಂ ನಾಯಕರು ಆರೋಪಿಸಿದ್ದಾರೆ. 

ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಮುಂದಾಗಿದ್ದ 19 ರೈತರನ್ನು ಘಾಜಿಪುರ ಗಡಿಯಲ್ಲಿ ತಡೆಯಲಾಗಿದೆ.

ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಅಹಿತಕರ ಘಟನೆಗಳನ್ನು ತಡೆಯಲು ಪ್ರತಿಭಟನಾ ನಿರತರನ್ನು ಬಸ್ ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.

ಎಂಎಸ್ ಪಿಗೆ ಸಂಬಂಧಿಸಿದಂತೆ ಕಾನೂನು ಖಾತ್ರಿ, ವಿದ್ಯುತ್ ತಿದ್ದುಪಡಿ ಮಸೂದೆ-2022 ರದ್ದುಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಒಂದು ಪೂರ್ತಿ ದಿನ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮಹಾಪಂಚಾಯತ್ ನ್ನು ಜಂತರ್ ಮಂತರ್ ನಲ್ಲಿ ಆಯೋಜಿಸಿದ್ದೆವೆ ಎಂದು ಎಸ್ ಕೆಎಂ (ರಾಜಕೀಯೇತರ) ಸದಸ್ಯ ಅಭಿಮನ್ಯು ಸಿಂಗ್ ಕೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT