ಜಂತರ್-ಮಂತರ್ ನಲ್ಲಿ ರೈತರ ಪ್ರತಿಭಟನೆ 
ದೇಶ

ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ನೂರಾರು ರೈತರ ಆಗಮನ; ಘಾಜಿಪುರದಲ್ಲಿ ಹಲವರು ವಶಕ್ಕೆ

ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ. 

ನವದೆಹಲಿ: ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂತರ್ ಮಂತರ್ ನಲ್ಲಿ ಕರೆ ನೀಡಿದ್ದ ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಹಲವು ರಾಜ್ಯಗಳಿಂದ ನೂರಾರು ಮಂದಿ ರೈತರು ದೆಹಲಿಗೆ ಆಗಮಿಸಿದ್ದಾರೆ.
 
ಕೆಲವು ಪ್ರದೇಶಗಳಲ್ಲಿ ರೈತರನ್ನು ಜಂತರ್ ಮಂತರ್ ಪ್ರವೇಶಿಸದಂತೆ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ ಎಂದು ಎಸ್ ಕೆಎಂ ನಾಯಕರು ಆರೋಪಿಸಿದ್ದಾರೆ. 

ಮಹಾಪಂಚಾಯತ್ ನಲ್ಲಿ ಭಾಗವಹಿಸಲು ಮುಂದಾಗಿದ್ದ 19 ರೈತರನ್ನು ಘಾಜಿಪುರ ಗಡಿಯಲ್ಲಿ ತಡೆಯಲಾಗಿದೆ.

ಈ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಅಹಿತಕರ ಘಟನೆಗಳನ್ನು ತಡೆಯಲು ಪ್ರತಿಭಟನಾ ನಿರತರನ್ನು ಬಸ್ ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.

ಎಂಎಸ್ ಪಿಗೆ ಸಂಬಂಧಿಸಿದಂತೆ ಕಾನೂನು ಖಾತ್ರಿ, ವಿದ್ಯುತ್ ತಿದ್ದುಪಡಿ ಮಸೂದೆ-2022 ರದ್ದುಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಒಂದು ಪೂರ್ತಿ ದಿನ ನಾವು ಶಾಂತಿಯುತ ಪ್ರತಿಭಟನೆ ನಡೆಸಲು ಮಹಾಪಂಚಾಯತ್ ನ್ನು ಜಂತರ್ ಮಂತರ್ ನಲ್ಲಿ ಆಯೋಜಿಸಿದ್ದೆವೆ ಎಂದು ಎಸ್ ಕೆಎಂ (ರಾಜಕೀಯೇತರ) ಸದಸ್ಯ ಅಭಿಮನ್ಯು ಸಿಂಗ್ ಕೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT