ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಭಾರತ ರತ್ನ ನೀಡಬೇಕಿತ್ತು: ಕೇಜ್ರಿವಾಲ್

ದೆಹಲಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಿದ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಭಾರತ ರತ್ನ ನೀಡಬೇಕು. ಆದರೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸುತ್ತಿದೆ...

ಗಾಂಧಿನಗರ: ದೆಹಲಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಿದ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಭಾರತ ರತ್ನ ನೀಡಬೇಕು. ಆದರೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಎದುರಿಸಲಿರುವ ಗುಜರಾತ್ ಗೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಇಂದು ಐದನೇ ಬಾರಿ ಕೇಜ್ರಿವಾಲ್ ಭೇಟಿ ನೀಡಿದ್ದು, ನ್ಯೂ ಯಾರ್ಕ್ ಟೈಮ್ಸ್ ನಮ್ಮ ಶಿಕ್ಷಣ ಮಾದರಿಯನ್ನು ಶ್ಲಾಘಿಸಿದೆ. ಆದರೆ ಕೇಂದ್ರ ಸರ್ಕಾರ ಸಿಸೋಡಿಯಾ ಅವರನ್ನು ಮೆಚ್ಚುವ ಬದಲು ಟಾರ್ಗೆಟ್ ಮಾಡುತ್ತಿದೆ ಎಂದರು.

ಶೀಘ್ರದಲ್ಲೇ ಸಿಸೋಡಿಯಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಕೇಜ್ರಿವಾಲ್, ನನ್ನನ್ನೂ ಬಂಧಿಸಬಹುದು. ಯಾರಿಗೆ ಗೊತ್ತು. ಗುಜರಾತ್ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲವನ್ನೂ ಮಾಡಲಾಗುತ್ತಿದೆ" ಎಂದು ದೆಹಲಿ ಸಿಎಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಗುಜರಾತ್‌ನಲ್ಲಿ ತಮ್ಮ ಆಮ್ ಆದ್ಮಿ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಲಿನ ಜನತೆಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆ ನೀಡುವುದಾಗಿ ಕೇದ್ರಿವಾಲ್ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ