ಬುಲೆಟ್ ರೈಲು ಸಾಂದರ್ಭಿಕ ಚಿತ್ರ 
ದೇಶ

ದೆಹಲಿ- ವಾರಣಾಸಿ ಬುಲೆಟ್ ರೈಲು ಪ್ರಸ್ತಾಪ: ರೈಲ್ವೆ ಮಂಡಳಿಯಿಂದ ವರದಿ ತಿರಸ್ಕಾರ

ದೆಹಲಿ ಮತ್ತು ವಾರಣಾಸಿ ನಡುವಿನ ಉದ್ದೇಶಿತ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಕುರಿತ ವರದಿಯನ್ನು ರೈಲ್ವೆ ಮಂಡಳಿ ತಿರಸ್ಕರಿಸಿದೆ. ಮಾರ್ಗದುದ್ದಕ್ಕೂ ಹಲವು ತಿರುವುಗಳು ಬರುವುದರಿಂದ ಗಂಟೆಗೆ 350 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಬುಲೆಟ್ ರೈಲಿಗೆ ಇದು ಸೂಕ್ತವಲ್ಲ ಎಂದು ರೈಲ್ವೆ ಮಂಡಳಿ ವರದಿ ತಿರಸ್ಕರಿಸಿರುವುದಾಗಿ ಮೂಲಗಳು ಹೇಳಿವೆ.

ನವದೆಹಲಿ: ದೆಹಲಿ ಮತ್ತು ವಾರಣಾಸಿ ನಡುವಿನ ಉದ್ದೇಶಿತ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಕುರಿತ ವರದಿಯನ್ನು ರೈಲ್ವೆ ಮಂಡಳಿ ತಿರಸ್ಕರಿಸಿದೆ. ಮಾರ್ಗದುದ್ದಕ್ಕೂ ಹಲವು ತಿರುವುಗಳು ಬರುವುದರಿಂದ ಗಂಟೆಗೆ 350 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಬುಲೆಟ್ ರೈಲಿಗೆ ಇದು ಸೂಕ್ತವಲ್ಲ ಎಂದು ರೈಲ್ವೆ ಮಂಡಳಿ ವರದಿ ತಿರಸ್ಕರಿಸಿರುವುದಾಗಿ ಮೂಲಗಳು ಹೇಳಿವೆ.

ಬುಲೆಟ್ ರೈಲು ಯೋಜನೆ ಕುರಿತು ರೈಲ್ವೆ ಮಂಡಳಿ ಕಾರ್ಯದರ್ಶಿ ಆರ್ ಎನ್ ಸಿಂಗ್ ನೇತೃತ್ವದಲ್ಲಿ ಕಳೆದ ವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.  ರಾಷ್ಟ್ರೀಯ ಹೆದ್ದಾರಿ 2ರ ಮಾರ್ಗದುದ್ದಕ್ಕೂ ಬುಲೆಟ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು.

ಈ ಕುರಿತ ಅಧ್ಯಯನ ವರದಿಯನ್ನು ರಾಷ್ಟ್ರೀಯ  ಹೈ ಸ್ಪೀಡ್ ರೈಲ್ವೆ ಕಾರ್ಪೋರೇಷನ್ ನಿಯಮಿತದಿಂದ ಸಭೆಯಲ್ಲಿ ಮಂಡಿಸಲಾಯಿತು. ಕಡಿಮೆ ಬೆಲೆಯಲ್ಲಿ ಭೂ ಸ್ವಾಧೀನ ಮತ್ತು ಕಡಿಮೆ ನಿರ್ಮಾಣ ವೆಚ್ಚಕ್ಕೆ ಈ ವರದಿ ನೆರವಾಗಲಿದೆ ಎಂದು ಹೇಳಲಾಗಿತ್ತು.

ಆದಾಗ್ಯೂ, ದೆಹಲಿ ಮತ್ತು ವಾರಣಾಸಿ ನಡುವಿನ ಅನೇಕ ಕಡೆಗಳಲ್ಲಿ ತಿರುವುಗಳು ಹೆಚ್ಚಾಗಿ ಬರುವುದರಿಂದ ಗಂಟೆಗೆ 350 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಹೈ ಸ್ಪೀಡ್ ರೈಲಿಗೆ ಅತ್ಯಂತ ಮಾರಕವಾಗಲಿದೆ ಎಂದು ಸಭೆಯಲ್ಲಿ ಹೇಳಲಾಯಿತು ಎಂದು ಮೂಲಗಳು ತಿಳಿಸಿವೆ. ಇದೀಗ ಗಂಟೆಗೆ 160 -200 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ವಂದೇ ಭಾರತ್  ಸೆಮಿ ಹೈ ಸ್ಪೀಡ್ ರೈಲು ಕಾರ್ಯಾಚರಣೆಯತ್ತ ಗಮನ ಹರಿಸುವಂತೆ ರೈಲ್ವೆ ಮಂಡಳಿ ಸಲಹೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT