ವರುಣ್ ಗಾಂಧಿ 
ದೇಶ

ಹಣದುಬ್ಬರ, ನಿರುದ್ಯೋಗ ವಿರುದ್ಧ ಹೋರಾಟ ಮುಂದುವರಿಕೆ: ಬಿಜೆಪಿ ಸಂಸದ ವರುಣ್ ಗಾಂಧಿ

ಹಣದುಬ್ಬರ ಹಾಗೂ ನಿರುದ್ಯೋಗ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಪಿಲಿಭಿತ್: ಹಣದುಬ್ಬರ ಹಾಗೂ ನಿರುದ್ಯೋಗ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ. ಭಾರತದಲ್ಲಿನ ಮಕ್ಕಳು ಹಾಗೂ ಯುವ ಜನತೆ ಗೌರವ ಪಡೆಯಲು ಕೆಲಸ ಮಾಡುತ್ತೇನೆ. ಇಲ್ಲಿ ಯಾರೂ ಕೂಡಾ ಸಹಾಯಕ್ಕಾಗಿ ಬೇರೆಯವರ ಮುಂದೆ ತಲೆ ತಗ್ಗಿಸಬಾರದು ಎಂದು ಹೇಳುವ ಮೂಲಕ ತನ್ನದೇ ಪಕ್ಷದ ವಿರುದ್ಧ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ನಿರುದ್ಯೋಗ ದೇಶದಲ್ಲಿ ನಿರ್ಮೂಲನೆಯಾಗುವವರೆಗೂ, ನಿಮ್ಮ ಮಕ್ಕಳು ಉದ್ಯೋಗ ಪಡೆಯುವುದಿಲ್ಲ, ನನ್ನ ಸಂಘರ್ಷ ಮುಂದುವರೆಯಲಿದೆ. ಭ್ರಷ್ಟಾಚಾರದ ವಿರುದ್ಧವೂ ನಾವು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದರು. 

ನಮ್ಮ ಪೂರ್ವಿಕರ ತ್ಯಾಗ, ಬಲಿದಾನ ವ್ಯರ್ಥವಾಗಲು ಅವಕಾಶ ನೀಡುವಿಲ್ಲ, ಮೂಲ ಸಮಸ್ಯೆಗಳು, ಅನ್ಯಾಯ ಮತ್ತು ಭ್ರಷ್ಟಾಚಾರ ವಿರುದ್ಧ ಜನರು ಧ್ವನಿ ಎತ್ತುವ ಕಾಲ ಬರಲಿದೆ ಎಂದು ಅವರು ಗುಡುಗಿದರು. ಪಿಲಿಭಿತ್ ಪ್ರವಾಸದ ವೇಳೆಯಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿದ ವರುಣ್ ಗಾಂಧಿ, ನಗರ ಸ್ಥಳೀಯ ಸಂಸ್ಥೆ ಸದಸ್ಯರೊಂದಿಗೆ ಸಂವಾದ ನಡೆಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT