ರಾಜಾ ಸಿಂಗ್ 
ದೇಶ

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಹೈದರಾಬಾದ್: ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಪ್ರವಾದಿ ಮುಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆಯ ನಂತರ ರಾಜಾ ಸಿಂಗ್ ಅವರ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ಮತ್ತು ಜನರ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಇಂದು ಅವರನ್ನು ಬಂಧಿಸಿದ್ದರು. 

ಬಂಧನಕ್ಕೊಳಗಾಗಿರುವ ರಾಜಾ ಸಿಂಗ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನಗೊಳಿಸಿದೆ.

'ನೀವು(ರಾಜಾ ಸಿಂಗ್) ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಇದು ಭಾರತೀಯ ಜನತಾ ಪಕ್ಷದ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಗಳು/ನಿಯೋಜನೆಗಳು ಯಾವುದಾದರೂ ಇದ್ದರೆ ಅದರಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಪ್ರಕಟೆಯಲ್ಲಿ ತಿಳಿಸಿದ್ದಾರೆ.

ನಿಮ್ಮನ್ನು ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ 10 ದಿನಗಳೊಳಗೆ ಕಾರಣವನ್ನು ನೀಡಬೇಕು ಎಂದು ಪಾಠಕ್ ಅವರು ರಾಜಾ ಸಿಂಗ್ ಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT