ಅರವಿಂದ ಕೇಜ್ರಿವಾಲ್ 
ದೇಶ

ಸಿಬಿಐ 2-3 ದಿನಗಳಲ್ಲಿ ಮನೀಶ್ ಸಿಸೋಡಿಯಾ ಬಂಧಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮುಂದಿನ ಕೆಲವೇ ದಿನಗಳಲ್ಲಿ ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಭಾವನಗರ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮುಂದಿನ ಕೆಲವೇ ದಿನಗಳಲ್ಲಿ ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಗುಜರಾತ್‌ನ ಭಾವನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು, "ಮುಂದಿನ 10 ದಿನಗಳಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುತ್ತಾರೆ ಎಂದು ನಾವು ಕೇಳಿದ್ದೇವೆ. ಆದರೆ ಇನ್ನು 2-3 ದಿನಗಳಲ್ಲಿ ಅವರನ್ನು ಬಂಧಿಸುತ್ತಾರೆ ಅಂತ ಅನಿಸುತ್ತಿದೆ" ಎಂದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ ಅವರು ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.

ಏತನ್ಮಧ್ಯೆ, ನಗರದಲ್ಲಿ 'ಅಭಿವೃದ್ಧಿ' ಕುರಿತು ಮಾತನಾಡಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, "ನಾವು 2 ಲಕ್ಷ ಸರ್ಕಾರಿ ಉದ್ಯೋಗಗಳು ಮತ್ತು 10 ಲಕ್ಷ ಖಾಸಗಿ ಉದ್ಯೋಗಗಳನ್ನು ನೀಡಿದ್ದೇವೆ... ದೇಶಾದ್ಯಂತ ಎಎಪಿ ಕುರಿತ ಜನರ ಉತ್ಸಾಹ ವೇಗವಾಗಿ ಬೆಳೆಯುತ್ತಿರುವುದನ್ನು ಕಂಡು ನನ್ನ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಆದರೆ ನಾನು ಪ್ರಾಮಾಣಿಕ ವ್ಯಕ್ತಿ ಮತ್ತು ಸಿಬಿಐಗೆ ಹೆದರುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT