ಸಂಜಯ್ ಸಿಂಗ್ 
ದೇಶ

ಪಕ್ಷ ಬದಲಾಯಿಸಲು ನಾಲ್ವರು ಶಾಸಕರಿಗೆ ಬಿಜೆಪಿ ತಲಾ 20 ಕೋಟಿ ರೂ. ಆಫರ್ ನೀಡಿದೆ: ಎಎಪಿ

ಬಿಜೆಪಿಯು ದೆಹಲಿಯ ತನ್ನ ನಾಲ್ವರು ಶಾಸಕರನ್ನು ಸಂಪರ್ಕಿಸಿದ್ದು, ಪಕ್ಷ ಬದಲಿಸಿ ಕೇಸರಿ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಬುಧವಾರ ಆರೋಪಿಸಿದೆ.

ನವದೆಹಲಿ: ಬಿಜೆಪಿಯು ದೆಹಲಿಯ ತನ್ನ ನಾಲ್ವರು ಶಾಸಕರನ್ನು ಸಂಪರ್ಕಿಸಿದ್ದು, ಪಕ್ಷ ಬದಲಿಸಿ ಕೇಸರಿ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಬುಧವಾರ ಆರೋಪಿಸಿದೆ.

ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು, ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಕುಮಾರ್ ಅವರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ನಾಯಕರು ಸಂಪರ್ಕಿಸಿದ್ದಾರೆ ಎಂದು ಹೇಳಿದರು.

"ಈ ನಾಲ್ವರು ಎಎಪಿ ಶಾಸಕರು ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ರೂ. ಮತ್ತು ಇತರ ಶಾಸಕರನ್ನು ತಮ್ಮೊಂದಿಗೆ ಕರೆತಂದರೆ 25 ಕೋಟಿ ರೂ.ಗಳನ್ನು ನೀಡುವ ಭರವಸೆ ನೀಡಲಾಗಿದೆ" ಎಂದು ಸಂಜ್ ಸಿಂಗ್ ದೂರಿದ್ದಾರೆ.

"ನಮ್ಮ ಶಾಸಕರು ಆಫರ್ ಒಪ್ಪಿಕೊಂಡು ಬಿಜೆಪಿ ಸೇರದಿದ್ದರೆ (ದೆಹಲಿ ಉಪಮುಖ್ಯಮಂತ್ರಿ) ಮನೀಶ್ ಸಿಸೋಡಿಯಾ ಅವರಂತೆ ಸಿಬಿಐ ಮತ್ತು ಇಡಿ ದಾಖಲಿಸುವ ಸುಳ್ಳು ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ" ಎಎಪಿ ನಾಯಕ ಹೇಳಿದ್ದಾರೆ. 

ಇನ್ನು ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಇದು "ಬಹಳ ಗಂಭೀರ ವಿಷಯ" ಮತ್ತು "ಪರಿಸ್ಥಿತಿಯ ಅವಲೋಕನಕ್ಕಾಗಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ(ಪಿಎಸಿ) ಸಭೆಯನ್ನು ಸಂಜೆ 4 ಗಂಟೆಗೆ ತಮ್ಮ ನಿವಾಸದಲ್ಲಿ ಕರೆಯಲಾಗಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT